ನೇಣು ಬಿಗಿದು ಆತ್ಮಹತ್ಯೆ

Update: 2019-03-29 17:27 GMT

ಕೊಲ್ಲೂರು, ಮಾ. 29: ಇಲ್ಲಿನ ಸುಧಾಕರ ಶೆಟ್ಟಿ (59) ಎಂಬವರು ವೈಯಕ್ತಿಕ ಕಾರಣಗಳಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮಾ.28ರ ಸಂಜೆ 5ರಿಂದ ಇಂದು ಬೆಳಗಿನ 7:30ರ ನಡುವಿನ ಅವಧಿಯಲ್ಲಿ ಕೊಲ್ಲೂರು ಗ್ರಾಮದ ಪಳ್ಳಿ ತುಂಡು ಎಂಬಲ್ಲಿರುವ ಸರಕಾರಿ ಅರಣ್ಯ ಜಾಗದ ಕೌಲು ಮರದ ಕೊಂಬೆಗೆ ಲುಂಗಿಯನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಂಕರನಾರಾಯಣ : ಶಂಕರನಾರಾಯಣ ಸರಕಾರಿ ಕಾಲೇಜಿನ ಪ್ರಥಮ ಪಿಯುಸಿ ವ್ಯಾಸಂಗ ಮಾಡುತಿದ್ದ ಅನಿತಾ (17) ಎಂಬವರು ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಮೂರು ವಿಷಯಗಳಲ್ಲಿ ಅನುತ್ತೀರ್ಣಗೊಂಡಿದ್ದರಿಂದ ನೊಂದು ಮಾ.19ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವರನ್ನು ಚಿಕಿತ್ಸೆಗಾಗಿ ಕುಂದಾಪುರ ಮತ್ತು ಮಣಿಪಾಲದ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ಮಾ.28ರ ಅಪರಾಹ್ನ 3:15ರ ಸುಮಾರಿಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News