ನಾಮಪತ್ರದಲ್ಲಿ ಸುಳ್ಳು ಮಾಹಿತಿ ಆರೋಪ: ಪ್ರತಾಪ್ ಸಿಂಹ ವಿರುದ್ಧ ದೂರು

Update: 2019-03-30 16:18 GMT

ಮೈಸೂರು, ಮಾ.30: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ನಾಮಪತ್ರ ಸಲ್ಲಿಸುವ ವೇಳೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಮೈಸೂರು ಎಪಿಎಂಸಿ ಅಧ್ಯಕ್ಷ ಪ್ರಭುಸ್ವಾಮಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಪ್ರತಾಪ್ ಸಿಂಹ ನಾಮಪತ್ರ ಸಲ್ಲಿಸುವ ವೇಳೆ ಪತ್ನಿ ಅರ್ಪಿತಾ ಹೆಸರಿನಲ್ಲಿ ವಿಜಯನಗರ 4ನೇ ಹಂತದಲ್ಲಿ ಸಂಖ್ಯೆ 12194/ಡಿ ನಿವೇಶನ ಇದೆ ಎಂದು ದಾಖಲು ಮಾಡಿದ್ದಾರೆ. ಆದರೆ ಅದು ಅವರ ಹೆಸರಿನಲ್ಲಿ ಇಲ್ಲ. ಬಿ.ಶಿವರಾಮಯ್ಯ ಎಂಬುವವರ ಹೆಸರಿನಲ್ಲಿದೆ. ಹಾಗಾಗಿ ಸುಳ್ಳು ಮಾಹಿತಿ ನೀಡಿರುವ ಪ್ರತಾಪ್ ಸಿಂಹ ವಿರುದ್ಧ ಕ್ರಮ ಜರುಗಿಸಬೇಕು ಎಂದು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಪ್ರತಾಪ್ ಸಿಂಹ ಪತ್ನಿ ಹೆಸರಿನಲ್ಲಿ ಇನ್ನೂ ಅನೇಕ ಆಸ್ತಿಯನ್ನು ಹೊಂದಿದ್ದಾರೆ ಎಂಬ ಅನುಮಾನವಿದೆ. ಹಾಗಾಗಿ ಈ ರೀತಿ ಸುಳ್ಳು ದಾಖಲೆಯನ್ನು ನೀಡಿದ್ದಾರೆ. ಹಾಗಾಗಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದು, ಕಾನೂನು ತಜ್ಞರ ಜೊತೆ ಸಮಾಲೋಚಿಸಿ ಸೋಮವಾರ ಹೈಕೋರ್ಟ್‍ನಲ್ಲಿ ಕೇಸ್ ದಾಖಲಿಸಲಾಗುವುದು ಎಂದು ಪ್ರಭುಸ್ವಾಮಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News