ದಾವಣಗೆರೆ ಲೋಕಸಭಾ ಕ್ಷೇತ್ರ: ಎರಡು ನಾಮಪತ್ರ ಸಲ್ಲಿಕೆ

Update: 2019-03-30 17:47 GMT

ದಾವಣಗೆರೆ,ಮಾ.30: ಎಪ್ರಿಲ್ 23 ರಂದು ನಡೆಯಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ದಾವಣಗೆರೆ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮಾ.28 ರಿಂದ ಆರಂಭವಾಗಿದ್ದು, ಮಾ.30 ರ ಇಂದು ಜಿಲ್ಲೆಯಲ್ಲಿ ಎರಡು ನಾಮಪತ್ರ ಸಲ್ಲಿಕೆಯಾಗಿದೆ.

ಬೆಂಗಳೂರಿನ ಕಲ್ಯಾಣ ನಗರದ ನಿವಾಸಿ ವಿ.ಮಂಜುನಾಥಾಚಾರ್(ಸಾಮಾನ್ಯ) (52 ವರ್ಷ) ಇವರು ಪಕ್ಷೇತರ ಅಭ್ಯರ್ಥಿಯಾಗಿ ಹಾಗೂ ದಾವಣಗೆರೆ ತಾಲ್ಲೂಕಿನ ಹಿರೇತೊಗಲೇರಿ ಗ್ರಾಮದ ನಿವಾಸಿಯಾದ ಟಿ.ಜಿ ಮಧು(ಸಾಮಾನ್ಯ) (30) ಇವರು ಸೊಷಿಯಲ್ ಯುನಿಟ್ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಪಕ್ಷದಿಂದ ಚುನಾವಣಾಧಿಕಾರಿ ಜಿ.ಎನ್.ಶಿವಮೂರ್ತಿ ಇವರಿಗೆ ಇಂದು ಜಿಲ್ಲಾಡಳಿತ ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News