ಕಾನೂನು ಸಾಕ್ಷರಥಾ ಮತ್ತು ಸಂಚಾರಿ ನ್ಯಾಯಾಲಯದ ಕಾನೂನು ಮಾಹಿತಿ ಶಿಬಿರ

Update: 2019-04-01 12:29 GMT

ಬಂಟ್ವಾಳ, ಮಾ. 1: ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ಪಂಚಾಯತ್ ಮತ್ತು ಕಂದಾಯ ಇಲಾಖೆ ಹಾಗೂ ಇತರ ಸರಕಾರಿ ಇಲಾಖೆಗಳ ಸಹಯೋಗದೊಂದಿಗೆ ಕಾನೂನು ಸಾಕ್ಷರಥಾ ಮತ್ತು ಸಂಚಾರಿ ನ್ಯಾಯಾಲಯದ ಕಾನೂನು ಮಾಹಿತಿ ಶಿಬಿರ ಮಾಣಿ ಗ್ರಾಪಂನಲ್ಲಿ ನಡೆಯಿತು.

ಸಹಾಯಕ ಸರಕಾರಿ ಅಭಿಯೋಜಕ ಹಾಗೂ ತಾ.ಕಾ.ಸೇ.ಸಮಿತಿಯ ಕಾರ್ಯನಿರ್ವಾಹಕ ಕಾರ್ಯದರ್ಶಿ ಎಂ.ಎಸ್.ಅಲಿ ಉದ್ಘಾಟಿಸಿದರು. ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ, ವಕೀಲ ದೀಪಕ್ ಪೆರಾಜೆ ಅವರು ಮೋಟಾರು ವಾಹನ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು. 

ವೇದಿಕೆಯಲ್ಲಿ ಸಹಾಯಕ ಸರಕಾರಿ ವಕೀಲರಾದ ಸತೀಶ್ ಕುಮಾರ್ ಶಿವಗಿರಿ, ಜನಾರ್ಧನ್ ಶೆಟ್ಟಿ, ಶೈಲಜಾ ರಾಜೇಶ್, ಗಣೇಶ್ ಪೈ, ಶ್ರೀಧರ ಪೈ, ಪ್ರಶಾಂತ್, ಸತೀಶ್ ಬಿ., ಪಂ.ಸದಸ್ಯ ಇಬ್ರಾಹಿಂ ಕೆ. ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News