ರಾಗಿಮುದ್ದೆ-ಸೊಪ್ಪು ಸಾರು ಸವಿದು ಪ್ರಚಾರ ನಡೆಸಿದ ಕೈ ಅಭ್ಯರ್ಥಿ ರಿಝ್ವಾನ್ ಅರ್ಶದ್

Update: 2019-04-01 17:49 GMT

ಬೆಂಗಳೂರು, ಎ.1: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಝ್ವಾನ್ ಅರ್ಶದ್ ಕಾರ್ಯಕರ್ತರೊಬ್ಬರ ಮನೆಯಲ್ಲಿ ರಾಗಿ ಮುದ್ದೆ, ಸೊಪ್ಪು ಸಾರು ಊಟ ಮಾಡುವ ಮೂಲಕ ಮುಖಂಡರೊಂದಿಗೆ ಕ್ಷೇತ್ರದಲ್ಲಿ ಮತಯಾಚನೆ ಮಾಡಿದರು.

ಸೋಮವಾರ ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿನ ಸಿ.ವಿ.ರಾಮನ್‌ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಜೀವನ್‌ಭೀಮಾನಗರ, ಸುಧಾಮನಗರ ವಾರ್ಡ್‌ನ ಕಾರ್ಯಕರ್ತ ಮರಿಯಪ್ಪ ಎಂಬುವರ ಮನೆಯಲ್ಲಿ ರಾಗಿಮುದ್ದೆ ಸೊಪ್ಪು ಸಾರು ಸವಿದರು.

ಆ ಬಳಿಕ ಸುಧಾಮನಗರ ಕೊಳಚೆ ಪ್ರಚಾರದಲ್ಲಿ ಕಾರ್ಯಕರ್ತರೊಂದಿಗೆ ಪ್ರಚಾರ ಕೈಗೊಂಡರು. ಇದೇ ಸಂದರ್ಭದಲ್ಲಿ ಕಾರ್ಯಕರ್ತರೊಬ್ಬರ ಮಗುವನ್ನು ಕೆಲಕಾಲ ಎತ್ತಿ ಮುದ್ದಾಡಿದರು. ಅಲ್ಲದೆ, ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿ ಮತಯಾಚನೆ ಮಾಡಿದರು.

ಕೇಂದ್ರ ಲೋಕಸಭಾ ಕ್ಷೇತ್ರದ ಹಾಲಿ ಸಂಸದರು ಕ್ಷೇತ್ರದ ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿಲ್ಲ. ಈ ಬಗ್ಗೆ ಮತದಾರರು ತಮ್ಮ ಬಳಿ ಅಳಲು ತೋಡಿಕೊಂಡಿದ್ದಾರೆ. ತಾವು ಮುಂದಿನ ದಿನಗಳಲ್ಲಿ ಜನರ ಧ್ವನಿಯಾಗಿ ಕೆಲಸ ಮಾಡಲಿದ್ದೇನೆಂಬ ಭರವಸೆ ನೀಡುವೆ

-ರಿಝ್ವಾನ್ ಅರ್ಶದ್, ಬೆಂಗಳೂರು ಕೇಂದ್ರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News