ಕಳವು ಪ್ರಕರಣ: ಓರ್ವನ ಬಂಧನ, 40 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ

Update: 2019-04-02 14:08 GMT

ಬೆಂಗಳೂರು, ಎ.2: ಕನ್ನ ಕಳವು ಆರೋಪ ಪ್ರಕರಣ ಸಂಬಂಧ ಇಲ್ಲಿನ ಸುದ್ದಗುಂಟೆ ಪಾಳ್ಯ ಠಾಣಾ ಪೊಲೀಸರು, ಓರ್ವನನ್ನು ಬಂಧಿಸಿ, 40 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಿದ್ದಾರೆ.

ನಗರದ ಉತ್ತರಹಳ್ಳಿಯ ಭುವನೇಶ್ವರಿ ನಗರ ನಿವಾಸಿ ಪ್ರಕಾಶ್(32) ಬಂಧಿತ ಆರೋಪಿಗಳೆಂದು ಆಗ್ನೇಯ ವಿಭಾಗದ ಇಶಾಪಂತ್ ತಿಳಿಸಿದ್ದಾರೆ.

ಹಲವು ದಿನಗಳ ಹಿಂದೆ ಭವಾನಿ ಲೇಔಟ್‌ನ ಚಂದ್ರೋದಯ ಕಲ್ಯಾಣ ಮಂಟಪದಲ್ಲಿ ಚಿನ್ನಾಭರಣ ಕಳವು ಆಗಿತ್ತು. ಈ ಸಂಬಂಧ ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿತ್ತು. ಇದರ ಅನ್ವಯ ತನಿಖೆ ನಡೆಸಿದ ಪೊಲೀಸರು, ಕಾರ್ಯಾಚರಣೆ ನಡೆಸಿ, ಆರೋಪಿ ಪ್ರಕಾಶ್ ಅನ್ನು ಬಂಧಿಸಿದ್ದಾರೆ. ಈತನ ವಿರುದ್ಧ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆ ಸೇರಿದಂತೆ ಒಟ್ಟು 8 ಪ್ರಕರಣಗಳು ದಾಖಲಾಗಿವೆ ಎಂದು ಇಶಾಪಂತ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News