ಪ್ರಚಾರದಲ್ಲಿ ಕಾಂಗ್ರೆಸ್ ಬಾವುಟ ಬಳಕೆ ಆರೋಪ: ಸುಮಲತಾ ವಿರುದ್ಧ ದೂರು
Update: 2019-04-02 16:37 GMT
ಮಂಡ್ಯ, ಎ.1: ಚುನಾವಣಾ ಪ್ರಚಾರ ವೇಳೆ ಕಾಂಗ್ರೆಸ್ ಪಕ್ಷದ ಬಾವುಟ ಬಳಕೆ ಮಾಡಿಕೊಳ್ಳುತ್ತಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ವಿರುದ್ಧ ಕ್ರಮ ಜರುಗಿಸುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.
ಸುಮಲತಾ ಪ್ರಚಾರದಲ್ಲಿ ಕಾಂಗ್ರೆಸ್ ಬಾವುಟ, ಪ್ರಚಾರ ಸಾಮಗ್ರಿ ಬಳಕೆಯಾಗುತ್ತಿವೆ. ಇದರಿಂದ ನಮ್ಮ ಪಕ್ಷಕ್ಕೆ ಚ್ಯುತಿಯಾಗುತ್ತಿದೆ. ಇದು ಕಾನೂನು ಬಾಹಿರ, ನೀತಿ ಸಂಹಿತೆ ಉಲ್ಲಂಘನೆ ಆಗಿದೆ ಅವರು ಆರೋಪಿಸಿದ್ದಾರೆ.