ಕೆಪಿಎಸ್‌ಸಿ ನೇಮಕಾತಿ ಹಗರಣ: ಅರ್ಹರಿಗೆ ನೇಮಕಾತಿ ಪತ್ರ ನೀಡಲು ಹೈಕೋರ್ಟ್ ಆದೇಶ

Update: 2019-04-02 16:47 GMT

ಬೆಂಗಳೂರು, ಎ.2: 1998, 1999 ಹಾಗೂ 2004ರ ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅರ್ಹರಿಗೆ ಈ ಕೂಡಲೇ ನೇಮಕಾತಿ ಪತ್ರವನ್ನು ನೀಡಬೇಕೆಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ಎಸ್.ಶ್ರೀನಿವಾಸ್ ಹಾಗೂ ಮತ್ತಿತರರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಹರಿಗೆ ನೇಮಕಾತಿ ಪತ್ರವನ್ನು ನೀಡಬೇಕೆಂದು ಸುಪ್ರೀಂಕೋರ್ಟ್ ಹಾಗೂ ರಾಜ್ಯ ಹೈಕೋರ್ಟ್ ತೀರ್ಪು ನೀಡಿದರೂ ಏಕೆ ನೇಮಕಾತಿ ಪತ್ರವನ್ನು ನೀಡಿಲ್ಲ ಎಂದು ಸರಕಾರಿ ವಕೀಲರನ್ನು ನ್ಯಾಯಪೀಠವು ಪ್ರಶ್ನಿಸಿತು. ಅಲ್ಲದೆ, ಅರ್ಹರಿಗೆ ಈ ಕೂಡಲೆ ನೇಮಕಾತಿ ಪತ್ರವನ್ನು ನೀಡದಿದ್ದರೆ ಎ.4ರಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯೇ ಹಾಜರಾಗಬೇಕಾಗುತ್ತದೆ ಎಂದು ಎಚ್ಚರಿಸಿದ ನ್ಯಾಯಪೀಠವು ಅರ್ಜಿ ವಿಚಾಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News