ಎಸ್‌ಡಿಪಿಐ ಹಿರಿಯ ನಾಯಕ ಎ.ಸಯೀದ್ ನಿಧನ

Update: 2019-04-02 18:14 GMT

ಮಂಗಳೂರು, ಎ.2: ಎಸ್‌ಡಿಪಿಐ ಹಿರಿಯ ನೇತಾರ, ಮಾಜಿ ರಾಷ್ಟ್ರೀಯ ಅಧ್ಯಕ್ಷ ಎ. ಸಯೀದ್ ಮಂಗಳವಾರ ಸಂಜೆ ನಿಧರಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕೇರಳದ ಕೋಝಿಕ್ಕೋಡ್‌ನ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದ ಸಯೀದ್ ಮಂಗಳವಾರ ಸಂಜೆ 5ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. 

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 1955ರಲ್ಲಿ ಜನಿಸಿದ ಎ.ಸಯೀದ್ 2002ರಿಂದ 2006ರವರೆಗೆ ರಾಷ್ಟ್ರೀಯ ಅಭಿವೃದ್ಧಿ ರಂಗ (ಎನ್‌ಡಿಎಫ್)ದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ನಂತರ ಪಿಎಫ್‌ಐಯ ರಾಷ್ಟ್ರೀಯ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. 
ಅವರ ಕುಟುಂಬ ವರ್ಗಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ ಫೈಝಿ ತಿಳಿಸಿದ್ದಾರೆ. 

ಮೃತರ ಅಂತ್ಯಕ್ರಿಯೆ ಬುಧವಾರ (ಎ.3)ದಂದು ಬೆಳಗ್ಗೆ 10 ಗಂಟೆಗೆ ಎಡವನ್ನ ಜುಮಾ ಮಸೀದಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸಂತಾಪ: ಎಸ್‌ಡಿಪಿಐ ರಾಷ್ಟ್ರೀಯ ಮಾಜಿ ಅಧ್ಯಕ್ಷ ಎ.ಸಯೀದ್ ನಿಧನಕ್ಕೆ ಎಸ್‌ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ, ರಾಜ್ಯ ಪ್ರಧಾನ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫಾನ್ಸೊ ಫ್ರಾಂಕೊ, ದ.ಕ. ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಮುಹಮ್ಮದ್ ಶಾಕೀಬ್, ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಸರ್ ಹಸನ್, ಪಿಎಎಫ್‌ಐ ರಾಷ್ಟ್ರೀಯ ಕಾರ್ಯದರ್ಶಿಗಳಾದ ಅನಿಸ್ ಅಹ್ಮದ್ ಬೆಂಗಳೂರು, ಅಬ್ದುಲ್ ವಾಹಿದ್ ಸೇಠ್ ಬೆಂಗಳೂರು, ಸಮಿತಿ ಸದಸ್ಯ ಕೆ.ಎಂ.ಶರೀಫ್, ದ.ಕ. ಜಿಲ್ಲಾಧ್ಯಕ್ಷ ಹನೀಫ್ ಕಾಟಿಪಳ್ಳ, ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ರಾಷ್ಟ್ರೀಯ ಕಾರ್ಯದರ್ಶಿ ಜಾಫರ್ ಸಾದಿಕ್ ಫೈಝಿ, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಫಯಾಝ್ ದೊಡ್ಡಮನೆ ಸಂತಾಪ ಸೂಚಿಸಿದ್ದಾರೆ. 

ಸಾಮಾಜಿಕ ಹೋರಾಟಗಾರ, ಲೇಖಕರಾದ ಎ.ಸಯೀದ್ ಸಾಬ್‌ರ ನಿಧನವು ಅತೀವ ದುಃಖ ತಂದಿದ್ದು ಈ ಸಮಾಜವು ಅಮೂಲ್ಯ ನಿಧಿಯನ್ನು ಕಳೆದುಕೊಂಡಂತಾಗಿದೆ. ಎ.ಸಯೀದ್ ಅವರ ಅಗಲುವಿಕೆಯ ದುಃಖವನ್ನು ಸಹಿಸಲು ದೇವರು ಅವರ ಕುಟುಂಬಕ್ಕೆ ಶಕ್ತಿ ತುಂಬಲಿ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News