ಚಾಕುವಿನಿಂದ ಇರಿದು ಯುವಕನ ಕೊಲೆ

Update: 2019-04-03 16:52 GMT

ಬೆಂಗಳೂರು, ಎ.3: ಮನೆಕಳವು ಸೇರಿ ಇನ್ನಿತರ ಗಂಭೀರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಹೆಗ್ಗನಹಳ್ಳಿ ನಿವಾಸಿ ನರಸಿಂಹ(25) ಎಂಬಾತನನ್ನು ಚಾಕುವಿನಿಂದ ಇರಿದು ಕೊಲೆಗೈದಿರುವ ದುರ್ಘಟನೆ ಇಲ್ಲಿನ ರಾಜಗೋಪಾಲ ನಗರದಲ್ಲಿ ನಡೆದಿದೆ.

ಹೆಗ್ಗನಹಳ್ಳಿಯಿಂದ ಮಂಗಳವಾರ ರಾತ್ರಿ ನಂದಿನಿಲೇಔಟ್‌ಗೆ ಬಂದಿದ್ದ ನರಸಿಂಹ, ಸ್ನೇಹಿತನ ಜೊತೆ ಮದ್ಯದಂಗಡಿಯೊಂದರಲ್ಲಿ ಮದ್ಯಪಾನ ಮಾಡಿದ್ದಾನೆ. ಬಳಿಕ ರಾಜಗೋಪಾಲ್‌ನಗರದ ಅನ್ನಪೂರ್ಣೇಶ್ವರಿ ನಗರಕ್ಕೆ ತೆರಳಿ ಬೈಕ್‌ವೊಂದರ ವಿಚಾರವಾಗಿ ಜಗಳ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಜಗಳ ವಿಕೋಪಕ್ಕೆ ತಿರುಗಿದಾಗ ಮೂರ್ನಾಲ್ಕು ಮಂದಿ ನರಸಿಂಹನ ಎದೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡ ನರಸಿಂಹ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಸಂಬಂಧ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News