ಪ್ರತಿಯೊಂದು ವರ್ಗಕ್ಕೂ ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ: ಶಾಸಕ ನರೇಂದ್ರ

Update: 2019-04-03 18:16 GMT

ಹನೂರು, ಎ.3: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತದ ಅವಧಿಯಲ್ಲಿ ಪ್ರತಿಯೊಂದು ವರ್ಗಕ್ಕೂ ಸಾಮಾಜಿಕ ನ್ಯಾಯ ಒದಗಿಸಿದ್ದು, ಜಾತಿ ಧರ್ಮ ರಹಿತ ಹಾಗೂ ಮಾನವೀಯ ಮೌಲ್ಯಗಳ ಆಧಾರದಲ್ಲಿ ಆಡಳಿತ ನಡೆಸಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಹನೂರು ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಶಾಸಕ ನರೇಂದ್ರ ಹೇಳಿದ್ದಾರೆ. 

ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಆರ್. ಧ್ರುವನಾರಾಯಣ್ ಪರ ಹನೂರು ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಯಾವೊಬ್ಬ ಅಲ್ಪಸಂಖ್ಯಾತರಿಗೂ ಸಹ ಯಾವ ಕ್ಷೇತ್ರದಲ್ಲೂ ಅವಕಾಶ ನೀಡಿಲ್ಲ. ನರೇಂದ್ರಮೋದಿಯವರು ಅಧಿಕಾರಕ್ಕೆ ಬಂದ ದಿನದಿಂದ ಸುಳ್ಳು ಆಶ್ವಾಸನೆಗಳನ್ನು ನೀಡಿ ದೇಶದ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದಾರೆ ಎಂದರು.

ದೇಶದ ಪ್ರತಿಯೊಬ್ಬ ಪ್ರಜೆಯೂ ಕೂಡ ಹಸಿವಿನಿಂದ ಬಳಲಬಾರದು ಎಂದು ನಮ್ಮ ಯುಪಿಎ ಸರಕಾರ ಕೇಂದ್ರದಲ್ಲಿ ಆಡಳಿತದ ಸಂದರ್ಭದಲ್ಲಿ ಆಹಾರ ಭದ್ರತೆ ಖಾಯ್ದೆ ಜೊತೆಗೆ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿರುವ ಹೆಗ್ಗಳಿಕೆ ಪಡೆದಿದೆ. ಆದ್ದರಿಂದ ಕೇಂದ್ರದಲ್ಲಿ ಯುಪಿಎ ಸರಕಾರವನ್ನು ಆಡಳಿತಕ್ಕೆ ತರಲು ಪ್ರತಿಯೊಬ್ಬ ಕಾರ್ಯಕರ್ತರು ತಮ್ಮ ಬೂತ್ ಮಟ್ಟದಿಂದ ಸಂಘಟನೆಗೆ ಒತ್ತು ನೀಡುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಪಂ ಸದಸ್ಯ ಬಸವರಾಜು, ತಾಪಂ ಸದಸ್ಯ ಜವಾದ್‌ ಅಹಮದ್, ಗ್ರಾಪಂ ಸದಸ್ಯ ರಾಮಲಿಂಗಮ್ ಮುಖಂಡರಾದ ಕೂಪ್ಪಳಿ ನಾಯಕ, ಪುಟ್ಟರಾಜು, ಚೆಲುವರಾಜು ಸೇರಿದಂತೆ ಹಲವರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News