ಯುಗಾದಿ ಪ್ರಯುಕ್ತ ಕೆಎಸ್ಸಾರ್ಟಿಸಿಯಿಂದ 600 ಹೆಚ್ಚುವರಿ ಬಸ್ ಸೇವೆ

Update: 2019-04-03 18:28 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಎ.3: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಬೆಂಗಳೂರಿನಿಂದ ರಾಜ್ಯ ಮತ್ತು ಹೊರ ರಾಜ್ಯದ ನಾನಾ ಭಾಗಗಳಿಗೆ ಎ.5 ಮತ್ತು ಎ.6ರಂದು ಹೆಚ್ಚುವರಿಯಾಗಿ 600ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಹಾಗೆಯೆ ಎ.7ರಂದು ನಾನಾ ಭಾಗಗಳಿಂದ ಬೆಂಗಳೂರಿಗೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಮಂಗಳೂರು, ಹಾಸನ, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರ್ಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ. ಮೈಸೂರು ರಸ್ತೆಯ ಸ್ಯಾಟಲೈಟ್‌ನಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಬಸ್‌ಗಳು ತೆರಳಲಿವೆ.

ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್ ಸೇರಿದಂತೆ ಇತರೆ ಸ್ಥಳಗಳಿಗೆ ಸಂಚರಿಸುವ ಬಸ್‌ಗಳು ಶಾಂತಿನಗರದಲ್ಲಿನ ಕೇಂದ್ರ ಘಟಕ-4 ಮತ್ತು ಘಟಕ-2ರ ಮುಂಭಾಗದಿಂದ ಹೊರಡಲಿವೆ. ಬಸವೇಶ್ವರ ನಿಲ್ದಾಣ, ವಿಜಯನಗರ, ಜಯನಗರ 4ನೆ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್, ಮಲ್ಲೇಶ್ವರಂ 18ನೆ ಮುಖ್ಯರಸ್ತೆ, ಬನಶಂಕರಿ, ಜೀವನ್‌ಬಿಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು. ಹೋಗುವ ಮತ್ತು ಹಿಂದಿರುಗುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದರೆ, ವಾಪಸ್ ಬರುವ ದರದಲ್ಲಿ ಶೇ.5ರಷ್ಟು ರಿಯಾಯಿತಿ ಸಿಗಲಿದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News