ಅಪಘಾತದಲ್ಲಿ ಗಾಯಗೊಂಡಿದ್ದ ಅಜ್ಜಿ-ಮೊಮ್ಮಗಳು ಸಾವು

Update: 2019-04-04 14:38 GMT

ಶಿವಮೊಗ್ಗ, ಏ. 4: ಜಿಲ್ಲೆಯ ತೀರ್ಥಹಳ್ಳಿಯ ಶಿವರಾಜಪುರದಲ್ಲಿ ಆಟೋ - ಕಾರು ಢಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡು ಉಡುಪಿ ಜಿಲ್ಲೆಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅಜ್ಜಿ ಹಾಗೂ ಮೊಮ್ಮಗಳು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿರುವ ಘಟನೆ ವರದಿಯಾಗಿದೆ. 

ತೀರ್ಥಹಳ್ಳಿಯ ಬೆಟ್ಟಮಕ್ಕಿ ನಿವಾಸಿ ಮೇರಿ ಡಯಾಸ್ (60) ಮತ್ತು ಅವರ ಮೊಮ್ಮಗಳು, 1 ನೇ ತರಗತಿ ವಿದ್ಯಾರ್ಥಿನಿ ನಿಶ್ಚಿತ (7) ಮೃತಪಟ್ಟವರೆಂದು ಗುರುತಿಸಲಾಗಿದೆ. ಅವಘಡದಲ್ಲಿ ಇವರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. 

ಸ್ಥಳೀಯ ಜೆ.ಸಿ. ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News