ಮೈತ್ರಿ ಅಭ್ಯರ್ಥಿ ಸೋತರೆ ನಮ್ಮನ್ನು ಕೇಳುವುದು ಬೇಡ, ನಾವು ಹೊಣೆಯಲ್ಲ: ಸಚಿವ ಜಿ.ಟಿ.ದೇವೇಗೌಡ

Update: 2019-04-05 15:42 GMT

ಮೈಸೂರು,ಎ.5: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸೋತರೆ ನಮ್ಮನ್ನು ಕೇಳುವುದು ಬೇಡ. ನಾನಾಗಲಿ ಅಥವಾ ಸಚಿವ ಸಾ.ರಾ.ಮಹೇಶ್ ಆಗಲಿ ಅದಕ್ಕೆ ಹೊಣೆಯಲ್ಲ ಎಂದು ಸಚಿವ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ನಗರದ ಖಾಸಗಿ ಹೋಟೆಲ್‍ನಲ್ಲಿ ಶುಕ್ರವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದರು. ಎಷ್ಟು ಸಮಾಧಾನಪಡಿಸಲು ಯತ್ನಿಸಿದರೂ ಕಾರ್ಯಕರ್ತರು ಸುಮ್ಮನಾಗಲಿಲ್ಲ ಎನ್ನಲಾಗಿದೆ. 'ನಮ್ಮ ಪ್ರಯತ್ನ ನಾವು ಮಾಡಿದ್ದು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಸೋತರೆ ಅದಕ್ಕೆ ನಾವು ಹೊಣೆಯಲ್ಲ. ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ವಿಶ್ವನಾಥ್ ಕೂಡ ಸೋತಿದ್ದರು. ಆಗ ಸಿದ್ದರಾಮಯ್ಯನವರೇನಾದರೂ ನೈತಿಕ ಹೊಣೆ ಹೊತ್ತಿದ್ದರಾ ಎಂದು ಪ್ರಶ್ನಿಸಿದ್ದಾರೆ. 

ಅದಕ್ಕಾಗಿ ಮೈತ್ರಿ ಅಭ್ಯರ್ಥಿ ಸೋತರೆ ನಾನಾಗಲಿ, ಸಾ.ರಾ.ಮಹೇಶ್ ಆಗಲಿ ಕಾರಣರಲ್ಲ ಎಂದು ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News