ಮಸೀದಿಯಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಪ್ರಾರ್ಥನೆ

Update: 2019-04-05 16:16 GMT

ಮಂಡ್ಯ, ಎ.5: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಶುಕ್ರವಾರ ಶಾಸಕರಾದ ಫಾರೂಕ್, ಎಂ.ಶ್ರೀನಿವಾಸ್, ಮುಖಂಡರ ಜತೆ ನಗರದ ಮಸೀದಿಗೆ ಭೇಟಿ ನೀಡಿ ಮುಸ್ಲಿಂ ಬಾಂಧವರೊಂದಿಗೆ ಸಾಮೂಹಿಕ ಪ್ರಾರ್ಥನೆ ಮಾಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್, ಚುನಾವಣೆಯಲ್ಲಿ ವಾತಾವರಣ ತುಂಬಾ ಚೆನ್ನಾಗಿದೆ. ಶುಕ್ರವಾರ ಮುಸ್ಲೀಮರಿಗೆ ಪವಿತ್ರ ದಿನ, ಹಾಗಾಗಿ ಮಸೀದಿಗೆ ಬಂದೆ. ಎ.8ರಿಂದ ಮಂಡ್ಯದಲ್ಲಿ ಸಿಎಂ ಕುಮಾರಸ್ವಾಮಿ, ಡಿಕೆಶಿ ಪ್ರಚಾರ ಮಾಡುತ್ತಾರೆ. ಸಿದ್ದರಾಮಯ್ಯ, ಇತರ ಮುಖಂಡರೂ ಪ್ರಚಾರಕ್ಕೆ ಬರಲಿದ್ದಾರೆ ಎಂದರು.

ಹಣ ಸಾಗಾಟದ ಬಗ್ಗೆ ಪಕ್ಷೇತರ ಅಭ್ಯರ್ಥಿ ಸುಮಲತಾ ಆರೋಪಕ್ಕೆ ಪ್ರತಿಕ್ರಿಯಿಸಿ, ಆರೋಪ ಮಾಡುವುದು ಬಿಟ್ಟರೆ ಅವರ ಕೈಯಲ್ಲಿ ಬೇರೇನೂ ಮಾಡಲು ಆಗುತ್ತಿಲ್ಲ. ಇದಕ್ಕೆ ನಾವಾಗಲೀ, ಕಾರ್ಯಕರ್ತರಾಗಲೀ ಹೆದರುವುದಿಲ್ಲ, ಬಗ್ಗುವುದೂ ಇಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಝಫರುಲ್ಲಾ ಖಾನ್, ಮುಡಾ ಮಾಜಿ ಅಧ್ಯಕ್ಷ ಅಸಾದುಲ್ಲಾ ಖಾನ್, ಹಲವು ಮುಖಂಡರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News