ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

Update: 2019-04-06 14:13 GMT

ಕೋಲಾರ,ಎ.6: ಅಪರಿಚಿತ ಮಹಿಳೆಯ ಶವ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶ್ರೀನಿವಾಸಪುರ ತಾಲೂಕಿನ ಚೆನ್ನಯ್ಯಗಾರಿಪಲ್ಲಿಯಲ್ಲಿ ನಡೆದಿದೆ.

ಚೆನ್ನಯ್ಯಗಾರಿಪಲ್ಲಿಯ ಮುನಿರತ್ನರೆಡ್ಡಿ ಎಂಬವರ ಮಾವಿನತೋಟದಲ್ಲಿ ಸುಟ್ಟು ಕರಕಲಾಗಿದ್ದ ಶವ ಪತ್ತೆಯಾಗಿದ್ದು, ಮಹಿಳೆಯ ಬಗ್ಗೆ ಯಾವುದೇ ಮಾಹಿತಿ ತಿಳಿದು ಬಂದಿಲ್ಲ. 

ಸುಮಾರು 22 ವರ್ಷದ ಮಹಿಳೆಯನ್ನು ಬೇರೆ ಎಲ್ಲೋ ಕೊಲೆ ಮಾಡಿ ನಂತರ ಮಾವಿನ ತೋಪಿನಲ್ಲಿ ತಂದು ಹಾಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News