ಕೆ.ಎಸ್.ಈಶ್ವರಪ್ಪರಿಗೆ ಜೀವ ಬೆದರಿಕೆ: ಎಸ್ಪಿಗೆ ದೂರು

Update: 2019-04-07 06:27 GMT

ಶಿವಮೊಗ್ಗ, ಎ.7: ಬಿಜೆಪಿ ಮುಖಂಡ, ಶಿವಮೊಗ್ಗ ಶಾಸಕ ಕೆ.ಎಸ್.ಈಶ್ವರಪ್ಪರಿಗೆ ಜೀವ ಬೆದರಿಕೆ ಕರೆ ಬಂದಿರುವ ಬಗ್ಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಅವರು ದೂರು ಸಲ್ಲಿಸಿದ್ದಾರೆ.

ಶನಿವಾರ ಸಂಜೆ ತನ್ನ ಮೊಬೈಲ್ ಫೋನ್‌ಗೆ ಎರಡು ಮೊಬೈಲ್ ನಂಬರ್‌ಗಳಿಂದ ಬೆದರಿಕೆ ಕರೆಗಳು ಬಂದಿವೆ. ಕರೆ ಮಾಡಿದಾತ ಉರ್ದು ಮಿಶ್ರಿತ ಭಾಷೆಯಲ್ಲಿ ಮಾತನಾಡಿದ್ದು, ಬಿಜೆಪಿಯಿಂದ ಸಂಸದ ಸ್ಥಾನಕ್ಕೆ ಮುಸ್ಲಿಮರಿಗೆ ಏಕೆ ಟೆಕೆಟ್ ನೀಡಿಲ್ಲ ಎಂದು ಪ್ರಶ್ನಿಸಿ ಜೀವ ಬೆದರಿಕೆ ಒಡ್ಡಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಆದ್ದರಿಂದ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ತನಗೆ ಸೂಕ್ತ ಭದ್ರತಾ ವ್ಯವಸ್ಥ್ಥೆ ಕಲ್ಪಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭ ಬಿಜೆಪಿ ಶಿವಮೊಗ್ಗ ಜಿಲ್ಲಾಧ್ಯಕ್ಷ ರುದ್ರೇಗೌಡ, ಉಪ ಮೇಯರ್ ಚನ್ನಬಸಪ್ಪ ಜ್ನಾನೇಶ್ವರ್, ನಾಗರಾಜ್, ಡಿ.ಎಸ್.ಅರುಣ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News