ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ನಂದ್ರಜೋಗ್ ಪ್ರಮಾಣ ವಚನ ಸ್ವೀಕಾರ

Update: 2019-04-07 15:34 GMT

ಮುಂಬೈ,ಎ.7: ನ್ಯಾ.ಪ್ರದೀಪ ನಂದ್ರಜೋಗ್ ಅವರು ಬಾಂಬೆ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿ ರವಿವಾರ ಪ್ರಮಾಣ ವಚನವನ್ನು ಸ್ವೀಕರಿಸಿದರು. ಇದಕ್ಕೂ ಮುನ್ನ ಅವರು ರಾಜಸ್ಥಾನ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿದ್ದರು.

ಈವರೆಗೆ ಬಾಂಬೆ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿದ್ದ ನ್ಯಾ.ನರೇಶ ಪಾಟೀಲ್ ಅವರು ಶನಿವಾರ ಸೇವೆಯಿಂದ ನಿವೃತ್ತರಾಗಿದ್ದಾರೆ.

ಇಲ್ಲಿಯ ರಾಜಭವನದಲ್ಲಿ ನಡೆದ ಸಂಕ್ಷಿಪ್ತ ಸಮಾರಂಭದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಚೆನ್ನಮನೇನಿ ವಿದ್ಯಾಸಾಗರ ರಾವ್ ಅವರು ನ್ಯಾ.ನಂದ್ರಜೋಗ್ ಅವರಿಗೆ ಪ್ರಮಾಣ ವಚನವನ್ನು ಬೋಧಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News