ಜೆ.ಅಲೆಗ್ಸಾಂಡರ್ ನಿವಾಸಕ್ಕೆ ಕಾಂಗ್ರೆಸ್ ನಾಯಕರ ಭೇಟಿ: ರಾಜೀನಾಮೆ ಹಿಂಪಡೆಯಲು ಮನವಿ

Update: 2019-04-07 16:59 GMT

ಬೆಂಗಳೂರು, ಎ.7: ಕಾಂಗ್ರೆಸ್ ಪಕ್ಷಕ್ಕೆ ನೀಡಿದ್ದ ರಾಜೀನಾಮೆ ಅನ್ನು ವಾಪಸ್ಸು ಪಡೆಯುವಂತೆ ಮಾಜಿ ಸಚಿವ ಜೆ.ಅಲೆಗ್ಸಾಂಡರ್ ಅವರಿಗೆ ಕಾಂಗ್ರೆಸ್ ನಾಯಕರು ಮನವಿ ಮಾಡಿದರು.

ರವಿವಾರ ಇಂದಿರಾನಗರದಲ್ಲಿರುವ ಮಾಜಿ ಸಚಿವ ಜೆ.ಅಲೆಗ್ಸಾಂಡರ್ ಅವರ ನಿವಾಸಕ್ಕೆ ಭೇಟಿ ನೀಡಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಸಚಿವ ರಾದ ಕೆ.ಜೆ.ಜಾರ್ಜ್, ಡಿ.ಕೆ.ಶಿವಕುಮಾರ್, ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಿಝ್ವನ್‌ ಅರ್ಶದ್ ಸೇರಿ ದಂತೆ ಪ್ರಮುಖ ನಾಯಕರು, ರಾಜೀನಾಮೆ ವಾಪಾಸ್ ಪಡೆಯುವಂತೆ ಮನವೊಲಿಸಿದರು.

ಕಾಂಗ್ರೆಸ್ ಪಕ್ಷವು ಕ್ರಿಶ್ಚಿಯನ್ ಸಮುದಾಯವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ ಎಂದು ಅಸಮಾಧಾನಗೊಂಡು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಪತ್ರ ಬರೆದಿದ್ದ ಜೆ.ಅಲೆಗ್ಸಾಂಡರ್, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News