ಜೂಜಾಡುತ್ತಿದ್ದ ವೇಳೆ ಜಗಳ: ಯುವಕನ ಕೊಲೆ

Update: 2019-04-07 17:59 GMT

ಬೆಂಗಳೂರು, ಎ.7:ಯುಗಾದಿಯ ಸಂಭ್ರಮದಲ್ಲಿ ಜೂಜಾಟ ಆಡುತ್ತಿದ್ದ ಯುವಕರ ನಡುವೆ ಜಗಳ ನಡೆದು ಓರ್ವನ ತಲೆಗೆ ಹೊಡೆದು ಕೊಲೆ ಮಾಡಿರುವ ದುರ್ಘಟನೆ ಇಲ್ಲಿನ ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ನಿವಾಸಿ ರಮೇಶ್ (35) ಎಂಬಾತ ಕೊಲೆಯಾದ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.

ದುಷ್ಕರ್ಮಿಗಳು ರಮೇಶ್‌ನ ತಲೆಗೆ ಬಲವಾಗಿ ಹೊಡೆದು ಕೊಲೆಗೈದು ಮೃತದೇಹವನ್ನು ರಾಜರಾಜೇಶ್ವರಿ ನಗರದ ಕೃಷ್ಣಪ್ಪ ಬಡಾವಣೆಯ ಖಾಲಿ ಜಾಗದಲ್ಲಿ ಎಸೆದು ಪರಾರಿಯಾಗಿದ್ದಾರೆ.

ಕೊಲೆಯಾದ ರಮೇಶ್ ಎಲ್ಲಿಯವರು ಎಂಬುದು ತಿಳಿದು ಬಂದಿಲ್ಲ. ಕೃಷ್ಣಪ್ಪ ಬಡಾವಣೆ ಬಳಿ ರವಿವಾರ ಬೆಳಗ್ಗೆ 6ರ ವೇಳೆ ವಾಯುಹಾರಕ್ಕೆ ಹೋದವರು ಮೃತದೇಹವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ದೂರು ದಾಖಲಿಸಿಕೊಂಡಿರುವ ರಾಜರಾಜೇಶ್ವರಿ ನಗರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News