ಗೋಳ್ತಮಜಲು: ಚಲಿಸುವ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ

Update: 2019-04-08 06:06 GMT

ಬಂಟ್ವಾಳ, ಎ.8: ಚಲಿಸುವ ರೈಲಿಗೆ ತಲೆ ಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಲಡ್ಕ ಸಮೀಪದ ಗೋಳ್ತಮಜಲು ಮದಕ ಎಂಬಲ್ಲಿ ನಡೆದಿದೆ.

ಗೋಳ್ತಮಜಲು ಗ್ರಾಮದ ಮೈರ ದಿ. ವೆಂಕಪ್ಪ ಗೌಡ ಎಂಬವರ ಪುತ್ರ ಪುರಂದರ (28) ಆತ್ಮಹತ್ಯೆ ಮಾಡಿಕೊಂಡ ಯುವಕ. ವೀರಕಂಬದಲ್ಲಿ ಗಿಳ್ಕಿಂಜತ್ತಾಯ ಜಾತ್ರೋತ್ಸವ ನಡೆಯುತ್ತಿದ್ದು, ನಿನ್ನೆ ರಾತ್ರಿ ಸುಮಾರು 10:30ರವರೆಗೂ ಪುರಂದರ ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲದೆ ಕಾರ್ಯಕ್ರಮವೊಂದರ ನಿರೂಪಣೆ ಕೂಡಾ ಮಾಡಿದ್ದರೆನ್ನಲಾಗಿದೆ.

ಪುರಂದರ ಅವರು ಸರ್ವೀಸ್ ಸ್ಟೇಷನ್ ಹಾಗೂ ಮಾರುತಿ ಶೋರೂಂ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಅವಿವಾಹಿತರಾಗಿದ್ದ ಪುರಂದರಿಗೆ ಕುಡಿತದ ಚಟವಿದ್ದು, ಅದನ್ನು ಬಿಡಿಸಲು ಅವರನ್ನು ಕೆಲ‌ ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಎಸ್ಸೈ ಚಂದ್ರಶೇಖರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News