3 ತಾಲೂಕುಗಳಲ್ಲಿ ಬೇಸಿಗೆ ರಜೆಯಲ್ಲೂ ಶಾಲಾ ಮಕ್ಕಳಿಗೆ ಬಿಸಿಯೂಟ: ರಾಜ್ಯ ಸರಕಾರದ ಆದೇಶ

Update: 2019-04-08 14:45 GMT

ಚಾಮರಾಜನಗರ, ಎ. 08 :ಜಿಲ್ಲೆಯ ಚಾಮರಾಜನಗರ, ಗುಂಡ್ಲುಪೇಟೆ ಹಾಗೂ ಯಳಂದೂರು ತಾಲೂಕುಗಳಲ್ಲಿ ಬರಗಾಲ ಪರಿಸ್ಥಿತಿ ಮುಂದುವರಿಯುತ್ತಿರುವುದರಿಂದ ಈ ತಾಲೂಕಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1 ರಿಂದ 9ನೇ ತರಗತಿವರೆಗಿನ ಮಕ್ಕಳಿಗೆ ನೀಡಲಾಗುತ್ತಿದ್ದ ಬಿಸಿಯೂಟ ಅಕ್ಷರ ದಾಸೋಹ ಕಾರ್ಯಕ್ರಮವನ್ನು ಬೇಸಿಗೆ ರಜೆಯಲ್ಲಿಯೂ ಮುಂದುವರೆಸಲು ಸರ್ಕಾರಿ ಆದೇಶಿಸಿದೆ.

ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಮತ್ತು ಶಿಕ್ಷಕರು ಅಗತ್ಯ ಕ್ರಮ ಕೈಗೊಂಡು ಕಾರ್ಯಕ್ರಮ ಮುಂದುವರೆಸಲು ತಿಳಿಸಲಾಗಿದೆ. 
ಅಕ್ಷರ ದಾಸೋಹ ಕಾರ್ಯಕ್ರಮದ ಪರಿಶೀಲನೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು ಹೆಚ್ಚು ಸಂಖ್ಯೆಯಲ್ಲಿ ಮಕ್ಕಳು ಕಾರ್ಯಕ್ರಮದ ಪ್ರಯೋಜನ ಪಡೆಯಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲತಾ ಕುಮಾರಿ ತಿಳಿಸಿದ್ದಾರೆ.   

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News