ಮಾಜಿ ಸಚಿವ ಚಿಂಚನಸೂರ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ
Update: 2019-04-08 22:07 IST
ಬೆಂಗಳೂರು, ಎ.8: ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ವಿರುದ್ಧ ಎನ್ಬಿಡಬ್ಲೂ ಜಾರಿ ಮಾಡಿ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಚೆಕ್ ಬೌನ್ಸ್ ಆರೋಪ ಪ್ರಕರಣದಲ್ಲಿ ಚಿಂಚನಸೂರ್ ವಿರುದ್ಧ ಅಂಜನಾ ಶಾಂತವೀರ್ ಚಿಂಚನಸೂರ್ ದೂರು ದಾಖಲಿಸಿದ್ದರು. ಈ ವಿಚಾರ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಅನೇಕ ಬಾರಿ ನೋಟಿಸ್ ನೀಡಿದ್ದರೂ ಚಿಂಚನಸೂರ್ ವಿಚಾರಣೆಗೆ ಗೈರು ಹಾಜರಾಗಿದ್ದರು.
ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ ಅವರಿದ್ದ ನ್ಯಾಯಪೀಠ ಚಿಂಚನಸೂರ್ ಅವರನ್ನು ಬಂಧಿಸಿ ಮೇ 2ರಂದು ಕೋರ್ಟ್ಗೆ ಹಾಜರುಪಡಿಸುವಂತೆ ಪೊಲಿೀಸರಿಗೆ ಸೂಚಿಸಿ ಆದೇಶ ಹೊರಡಿಸಿದೆ.
ಚೆಕ್ಬೌನ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಬುರಾವ್ ಚಿಂಚನಸೂರ್ ವಿರುದ್ಧ ಅಂಜನಾ ಶಾಂತವೀರ್ ಚಿಂಚನಸೂರ್ ಅವರು ದೂರು ದಾಖಲಿಸಿದ್ದರು.