ಕನ್ಹಯ್ಯ ಕುಮಾರ್ ನಾಮಪತ್ರ ಸಲ್ಲಿಕೆ

Update: 2019-04-09 14:46 GMT

ಪಾಟ್ನ, ಎ.9: ಸಿಪಿಐ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣಾ ಕಣಕ್ಕಿಳಿದಿರುವ ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಬಿಹಾರದ ಬೆಗುಸರಾಯ್ ಕ್ಷೇತ್ರದಿಂದ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.

ಯುವಜನರೇ ಅಧಿಕವಿದ್ದ ನೂರಾರು ಬೆಂಬಲಿಗರೊಂದಿಗೆ ನಗರದಲ್ಲಿ ರ್ಯಾಲಿ ನಡೆಸಿದ ಕನ್ಹಯ್ಯ ಕುಮಾರ್ ನಾಮಪತ್ರ ಸಲ್ಲಿಸಿದರು. ಎಡಪಕ್ಷಗಳ ಜಂಟಿ ಅಭ್ಯರ್ಥಿಯಾಗಿರುವ ಕನ್ಹಯ್ಯ ಕುಮಾರ್ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರನ್ನು ಎದುರಿಸಲಿದ್ದಾರೆ. ಈ ಕ್ಷೇತ್ರದಲ್ಲಿ ತನ್ವೀರ್ ಹಸನ್‌ರನ್ನು ಆರ್‌ಜೆಡಿ ಕಣಕ್ಕಿಳಿಸುವ ನಿರೀಕ್ಷೆಯಿದೆ. 2014ರ ಚುನಾವಣೆಯಲ್ಲಿ ಹಸನ್ ಬಿಜೆಪಿಯ ಭೋಲಾ ಸಿಂಗ್ ಎದುರು ಸೋಲುಂಡಿದ್ದರು.

 2016ರ ಫೆಬ್ರವರಿಯಲ್ಲಿ ಜೆಎನ್‌ಯು ಆವರಣದಲ್ಲಿ ಭಾರತ ವಿರೋಧಿ ಘೋಷಣೆ ಮೊಳಗಿದಾಗ ಅದನ್ನು ತಡೆಯಲು ಪ್ರಯತ್ನ ನಡೆಸಲಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಕನ್ಹಯ್ಯ ಕುಮಾರ್‌ರನ್ನು ದೇಶದ್ರೋಹದ ಆರೋಪದಡಿ ಬಂಧಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News