ಮೈಸೂರಿನಲ್ಲಿ ಚುನಾವಣಾ ಪ್ರಚಾರ: ಸುಮಲತಾ ಹೆಸರು ಹೇಳಿ ಪ್ರತಾಪ್ ಸಿಂಹ ಹೆಸರು ಮರೆತ ಮೋದಿ!

Update: 2019-04-09 15:44 GMT

ಮೈಸೂರು,ಎ.9: ತಮ್ಮ ಸುಧೀರ್ಘ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಕೊನೆವರೆಗೂ ಪ್ರಸ್ತಾಪಿಸದೆ ಮಾತು ಮುಗಿಸಿದ ಘಟನೆ ನಡೆಯಿತು.

ಮಂಗಳವಾರ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಸಂಕಲ್ಪ ರ‍್ಯಾಲಿಯಲ್ಲಿ ಭಾಗವಹಿಸಿ ಮಾತನಾಡುವ ವೇಳೆ ಅಪ್ಪಿ ತಪ್ಪಿಯೂ ಪ್ರತಾಪ್ ಸಿಂಹ ಹಾಗೂ ವಿ.ಶ್ರೀನಿವಾಸಪ್ರಸಾದ್ ಅವರ ಹೆಸರನ್ನು ಹೇಳದಿರುವುದು ಚರ್ಚೆಗೆ ಗ್ರಾಸವಾಗಿದೆ.

ಪಕ್ಕದ ಜಿಲ್ಲೆ ಮಂಡ್ಯದಲ್ಲಿ ಬಿಜೆಪಿ ನೈತಿಕ ಬೆಂಬಲ ನೀಡಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಹೆಸರನ್ನು ಹೇಳಿ ತಮ್ಮ ಪಕ್ಷದ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಹೇಳದಿರುವುದು ಅಚ್ಚರಿಯುಂಟು ಮಾಡಿದ್ದು, ಭಾಷಣದ ವೇಳೆ ನಮ್ಮ ಪಕ್ಷದ ಉಮೇದುವಾರರು ಎಂದಷ್ಟೇ ಹೇಳಿದರು. ಕಳೆದ ಬಾರಿಯ ಚುನಾವಣಾ ಪ್ರಚಾರದಲ್ಲಿ ಪ್ರತಾಪ್ ಸಿಂಹ ಹೆಸರು ಹೇಳಿ ಕೈ ಎತ್ತಿ ಹಿಡಿದು ಮೋದಿ ಅವರು ಭಾಷಣ ಮಾಡಿದ್ದರು. ಆದರೆ ಈ ಬಾರಿ ಪ್ರತಾಪ್ ಸಿಂಹ ಹೆಸರು ಹೇಳದೆ ಭಾಷಣ ಮುಗಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News