ಮಿಥುನ್ ರೈಯನ್ನು ಗೆಲ್ಲಿಸಿ: ಇಬ್ರಾಹೀಂ ಕೋಡಿಜಾಲ್

Update: 2019-04-10 11:32 GMT

ಮಂಗಳೂರು, ಎ.10: ಕಾಂಗ್ರೆಸ್ ಹೈಕಮಾಂಡ್ ದ.ಕ.ಲೋಕಸಭಾ ಕ್ಷೇತ್ರದಲ್ಲಿ ಯುವ ನಾಯಕ ಮಿಥುನ್ ರೈಯನ್ನು ಕಣಕ್ಕಿಳಿಸಿದೆ. ವಿದ್ಯಾವಂತ ಮತ್ತು ಪ್ರಜ್ಞಾವಂತ, ಸಮರ್ಥ ಹೋರಾಟಗಾರರಾಗಿರುವ ಮಿಥುನ್ ರೈಯನ್ನು ಗೆಲ್ಲಿಸುವ ಮೂಲಕ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಸಂಸತ್‌ನಲ್ಲಿ ಧ್ವನಿ ಎತ್ತಲು ಅವಕಾಶ ನೀಡಬೇಕು ಎಂದು ಮುಡಾ ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ಮತದಾರರಲ್ಲಿ ಮನವಿ ಮಾಡಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು, ನಾನು ಕಳೆದ 52 ವರ್ಷಗಳ ರಾಜಕೀಯ ಜೀವನದಲ್ಲಿ ಅನೇಕ ಪ್ರಧಾನ ಮಂತ್ರಿಗಳನ್ನು ಕಂಡಿದ್ದೇನೆ. ಆದರೆ, ಮೋದಿಯಂತಹ ಸುಳ್ಳುಗಾರ ಪ್ರಧಾನಿಯನ್ನು ಕಂಡಿಲ್ಲ. ಅವರ ಅವಿವೇಕಿ ನಿರ್ಧಾರದಿಂದ ಸಮಸ್ಯೆಗಳಾಗಿದೆಯೇ ವಿನಃ ಪರಿಹಾರ ಕಂಡಿಲ್ಲ. ಮೋದಿಯ ಬಲ ತಗ್ಗಿಸಲು ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್‌ರನ್ನು ಸೋಲಿಸಬೇಕಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಬಿ.ಎಚ್.ಖಾದರ್, ಸದಾಶಿವ ಉಳ್ಳಾಲ್, ಪದ್ಮನಾಭ ನರಿಂಗಾನ, ನೀರಜ್‌ಪಾಲ್, ನವೀನ್ ಡಿಸೋಜ, ಸಂತೋಷ್ ಕುಮಾರ್ ಶೆಟ್ಟಿ, ನಝೀರ್ ಬಜಾಲ್, ಶಬ್ಬೀರ್ ಸಿದ್ದಕಟ್ಟೆ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News