ಮೈಸೂರು: ಗೃಹಿಣಿ ಮೇಲೆ ಸೀಮೆ ಎಣ್ಣೆ ಸುರಿದು ಕೊಲೆ ಮಾಡಿದ್ದ ಮೂವರಿಗೆ ಜೀವಾವಧಿ ಶಿಕ್ಷೆ

Update: 2019-04-10 17:09 GMT

ಮೈಸೂರು,ಎ.10: ಕ್ಷುಲ್ಲಕ ಕಾರಣಕ್ಕಾಗಿ ಗೃಹಿಣಿ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ಇಬ್ಬರು ಪುರುಷರು ಮತ್ತು ಓರ್ವ ಮಹಿಳೆಗೆ ಮೈಸೂರಿನ ಏಳನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ 20ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದೆ.

ನಂಜನಗೂಡು ತಾಲೂಕಿನ ಮುದ್ದಹಳ್ಳಿ ಗ್ರಾಮದ ಮಹೇಶ್ ಎಂಬಾತನ ಪತ್ನಿ ಮಂಜುಳ ಅವರನ್ನು ಕೊಲೆ ಮಾಡಿರುವ ಆರೋಪದ ಸಾಬೀತಾದ ಹಿನ್ನೆಲೆಯಲ್ಲಿ ಗ್ರಾಮದ ನಿವಾಸಿ ನಿಂಗಣ್ಣ, ಅವರ ಪತ್ನಿ ನಾಗಮ್ಮ, ಮತ್ತು ಅವರ ಪುತ್ರ ಎಂ.ಎನ್ ಪ್ರಸಾದ್ ಗೆ ಶಿಕ್ಷೆ ವಿಧಿಸಲಾಗಿದೆ. 

ಜನವರಿ 4 2016ರಂದು ಈ ಮೂವರು ಮಂಜುಳ ಅವರನ್ನು ಮನೆಯೊಳಗೆ ಎಳೆದುಕೊಂಡು ಹೋಗಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಿ.ಚಂದ್ರಶೇಖರ್ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 20ಸಾವಿರ ರೂ.ದಂಡ ವಿಧಿಸಿ ತೀರ್ಪಿತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News