ಅನಿಲಕಟ್ಟೆ: ಮುಖ್ಯ ಶಿಕ್ಷಕಿಗೆ ಬೀಳ್ಕೊಡುಗೆ

Update: 2019-04-11 14:58 GMT

ವಿಟ್ಲ, ಎ.11: ಅನಿಲಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರಾಜೀವಿ ಬಂಗೇರ ನಿವೃತ್ತಿ ಹೊಂದಿದ್ದು, ಅವರನ್ನು ಇತ್ತೀಚೆಗೆ ಶಾಲಾಭಿವೃದ್ಧಿ ಸಮಿತಿ ಹಾಗೂ ನಾಗರಿಕರ ಪರವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.

ಸ್ತ್ರೀ ಶಕ್ತಿ ಸಂಘಟನೆಯ ವತಿಯಿಂದ ನೆನಪಿನ ಕಾಣಿಕೆಗಳನ್ನು ನೀಡಿ, ಗೌರವಿಸಲಾಯಿತು.

ಶಾಲೆಯ ಅಧ್ಯಕ್ಷ ವಸಂತ ಸೊರಂಗದ ಮೂಲೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಾಹಿತ್ಯ ವೇದಿಕೆಯ ಜಿಲ್ಲಾಧ್ಯಕ್ಷ ಅಬೂಬಕರ್ ಅನಿಲಕಟ್ಟೆ, ಶಿಕ್ಷಣ ತಜ್ಞ ಈಶ್ವರ ಭಟ್ ಪೂರ್ಲಪ್ಪಾಡಿ, ಗಂಗಾಧರ ಗೌಡ, ಅಶೋಕ ಅನಿಲಕಟ್ಟೆ ಭಾಗವಹಿಸಿ ರಾಜೀವಿಯವರ ಸೇವೆಯನ್ನು ಕೊಂಡಾಡಿ ವಿಶ್ರಾಂತ ಜೀವನವು ಸುಖಮಯವಾಗಿರಲೆಂದು ಹಾರೈಸಿದರು. ಶಿಕ್ಷಕ ಜಯರಾಮ ಸ್ವಾಗತಿಸಿದರು. ಉಷಾ ಅನಿಲಕಟ್ಟೆ ವಂದಿಸಿದರು.

 ಹಳೆ ವಿದ್ಯಾರ್ಥಿ ನಂದಿತಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News