ಮಂಡ್ಯದಲ್ಲಿ ಮುಂದುವರಿದ ಕೈ ನಾಯಕರ ಮುನಿಸು

Update: 2019-04-12 07:13 GMT

ಮಂಡ್ಯ, ಎ.12: ಮಂಡ್ಯದಲ್ಲಿ ಕಾಂಗ್ರೆಸ್ ನಾಯಕರ ಮುನಿಸು ಮುಂದುವರಿದಿದ್ದು, ಮಂಡ್ಯದಲ್ಲಿ ನಡೆಯಲಿರುವ ಕಾಂಗ್ರೆಸ್ –ಜೆಡಿಎಸ್  ಜಂಟಿ  ಸಮಾವೇಶದಲ್ಲಿ ತಾನು ಭಾಗವಹಿಸುವುದಿಲ್ಲ ಎಂದು ಮಾಜಿ ಶಾಸಕ ಚೆಲುವರಾಯ ಸ್ವಾಮಿ  ಅವರು ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯರಿಗೆ ತಿಳಿಸಿದ್ದಾರೆ.

ಸಿದ್ದರಾಮಯ್ಯರನ್ನು ಭೇಟಿಯಾದ ಚೆಲುವರಾಯ ಸ್ವಾಮಿ   ಅವರು ಮಂಡ್ಯ ಸಮಾವೇಶದಲ್ಲಿ ತಾನು ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಮಂಡ್ಯದಲ್ಲಿ ಕಾಂಗ್ರೆಸ್ ನಾಯಕರನ್ನು ಕಡೆಗಣಿಸಲಾಗುತ್ತಿದೆ. ನಮಗೆ ಸ್ವಾಭಿಮಾನ ಇಲ್ಲವೇ ? ಎಂದು ಚೆಲುವರಾಯ ಸ್ವಾಮಿ   ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಸಮಾವೇಶದ ಬ್ಯಾನರ್ ನಲ್ಲೂ ಅವರ ಫೋಟೊ ನಾಪತ್ತೆಯಾಗಿತ್ತು ಎಂದು ತಿಳಿದು ಬಂದಿದೆ.

ಚೆಲುವರಾಯ ಸ್ವಾಮಿ    ಫೋಟೊ ಹಾಕದೆ ಎಡವಟ್ಟು ಮಾಡಿಕೊಂಡ ವಿಚಾರ ಸಂಘಟಕರ ಗಮನಕ್ಕೆ ಬರುತ್ತಿದ್ದಂತೆ ಬ್ಯಾನರ್ ನ್ನು ಅಲ್ಲಿಂದ ತೆರವುಗೊಳಿಸಲಾಗಿತ್ತು .

ಕಾಂಗ್ರೆಸ್ ಅಧ್ಯಕ್ಷ  ರಾಹುಲ್ ಗಾಂಧಿ ಮಂಡ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಚೆಲುವರಾಯ ಸ್ವಾಮಿಗೆ ಕಾರ್ಯಕ್ರಮದಲ್ಲಿ ತಪ್ಪದೇ ಭಾಗಿಯಾಗಲು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ  ಎಂದು ಮೂಲಗಳು ತಿಳಿಸಿವೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News