ವಿದ್ಯುತ್ ಸ್ಪರ್ಶಿಸಿ ತಾಯಿ-ಮಗಳು ಸಾವು

Update: 2019-04-12 15:11 GMT

ಚಾಮರಾಜನಗರ,ಎ.12: ನೀರಿಗೆ ಬಿದ್ದಿದ್ದ ವಿದ್ಯುತ್ ತಂತಿಯಿಂದಾಗಿ, ವಿದ್ಯುತ್ ಸ್ಪರ್ಶಿಸಿ ತಾಯಿ ಮಗಳು ಸಾವನ್ನಪ್ಪಿದ ಘಟನೆ ತಾಲೂಕಿನ ಹೆಬ್ಬಸೂರು ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ ತಾಲೂಕಿನ ಚಂದಕವಾಡಿ ಸಮೀಪದ ಹೆಬ್ಬಸೂರು ಬಳಿ ಸುವರ್ಣಾವತಿ ಹೊಳೆಯಲ್ಲಿ ಘಟನೆ ನಡೆದಿದ್ದು, ಸ್ನಾನಕ್ಕೆಂದು ಹೊಳೆಗೆ ಇಳಿದಿದ್ದಾಗ ನೀರಿನೊಳಗೆ ಕಡಿದು ಬಿದ್ದ ವಿದ್ಯುತ್ ತಂತಿಯಿಂದ ವಿದ್ಯುತ್ ಹರಿದು ಹೆಬ್ಬಸೂರು ಗ್ರಾಮದ ಮಂಜುಳಾ(38) ಹಾಗೂ ಮಗಳು ಶ್ರಾವ್ಯಶ್ರೀ (10) ಸಾವನ್ನಪ್ಪಿದ್ದಾರೆ.

ಇನ್ನೊಬ್ಬಳು ಮಗಳು ಯಶಶ್ರೀ ಅಪಾಯದಿಂದ ಪಾರಾಗಿದ್ದು, ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾಮಸಮುದ್ರ ಪೂರ್ವ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಚೆಸ್ಕಾಂ ಅಧಿಕಾರಿಗಳು ವಿದ್ಯುತ್ ತಂತಿ ತುಂಡಾಗಿರುವ ಬಗ್ಗೆ ಹಾಗೂ ವಿದ್ಯುತ್ ತಂತಿ ಜೋಡಿಸುವ ಕಾರ್ಯ ಮುಂದುವರೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News