ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಲಕ್ಷಾಂತರ ರೂ. ನಗದು ವಶ

Update: 2019-04-13 13:54 GMT

ಶಿವಮೊಗ್ಗ,ಎ.13: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಭದ್ರಾವತಿ ತಾಲೂಕಿನ ನಾಗತಿಬೆಳಗಲು ಗ್ರಾಮದಲ್ಲಿ ತೆರೆಯಲಾಗಿರುವ ಚೆಕ್‍ಪೋಸ್ಟ್ ನಲ್ಲಿ ದಾಖಲೆಯಿಲ್ಲದೆ ಕೊಂಡೊಯ್ಯುತ್ತಿದ್ದ ಲಕ್ಷಾಂತರ ರೂ.ಗಳನ್ನು ವಶಕ್ಕೆ ಪಡೆದಿರುವ ಘಟನೆ ವರದಿಯಾಗಿದೆ. 

ಮಾರುತಿ ಓಮ್ನಿ ಕಾರಿನಲ್ಲಿ ಶಿವಮೂರ್ತಿ ಎಂಬುವರು ಕೊಂಡೊಯ್ಯುತ್ತಿದ್ದ 7 ಲಕ್ಷ ರೂ. ಗಳನ್ನು ವಶಕ್ಕೆ ಪಡೆಯಲಾಗಿದೆ. ಮತ್ತೊಂದು ಘಟನೆಯಲ್ಲಿ  ಬೊಲೆರೋ ಕಾರಿನಲ್ಲಿ ಕೊಂಡೊಯ್ಯುತ್ತಿದ್ದ 2.12 ಲಕ್ಷ ರೂ.ಗಳನ್ನು ಇಬ್ಬರು ವ್ಯಕ್ತಿಗಳಿಂದ ವಶಕ್ಕೆ ಪಡೆಯಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News