ಹನೂರು: ಮೈತ್ರಿ ಅಭ್ಯರ್ಥಿ ಪರ ಡಿಸಿಎಂ ಬಿರುಸಿನ ಪ್ರಚಾರ

Update: 2019-04-13 18:30 GMT

ಹನೂರು, ಎ.13: ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಡಿಸಿಎಂ ಪರಮೇಶ್ವರ್ ಮೈತ್ರಿ ಅಭ್ಯರ್ಥಿ ಧ್ರುವನಾರಾಯಣ್ ಪರ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು.

ಈ ವೇಳೆ ಮಾತನಾಡಿದ ಉಪಮುಖ್ಯಮಂತ್ರಿ ಪರಮೇಶ್ವರ್, ನಮ್ಮ ನಮ್ಮ ಸರಕಾರವನ್ನು ಶೇ. 20ರಷ್ಟು ಕಮಿಷನ್ ಸರಕಾರ ಎಂದು ಆಪಾದನೆ ಮಾಡಿದ ನರೇಂದ್ರ ಮೋದಿಯವರು ಆಧಾರ ನೀಡಲೆಂದು ತಾಕೀತು ಮಾಡಿದರು.

ದೇಶದಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬಂದರೆ ಸರ್ವಾಧಿಕಾರವಾಗುತ್ತದೆ. ನರೇಂದ್ರ ಮೋದಿ ಮಹಾನ್ ಸುಳ್ಳುಗಾರ. 5 ವರ್ಷದ ಆಡಳಿತದ ಅವಧಿಯಲ್ಲಿ ಪೊಳ್ಳು ಭರವಸೆಗಳನ್ನು ನೀಡಿ ಜನರಿಗೆ ವಂಚಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಮುಖಂಡರು ಮತದಾರರ ಬಳಿ ಹೋಗಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಎನ್ನದೆ ಮೋದಿಗೆ ಮತ ನೀಡಿ ಎಂದು ಮತ ಭಿಕ್ಷೆ ಕೇಳುತ್ತಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದು ವಾಗ್ದಾಳಿ ನಡೆಸಿದರು.

ಚಾಮರಾಜನಗರ ಲೋಕಸಭಾ ಕ್ಷೇತ್ರದ ಧ್ವನಿ ಸಂಸತ್ತಿನಲ್ಲಿ ಮತ್ತೊಮ್ಮೆ ಕೇಳಿಸಬೇಕೆಂದರೆ ಧ್ರುವನಾರಾಯಣ್‌ಗೆ ಬೆಂಬಲಿಸುವಂತೆ ಮನವಿ ಮಾಡಿದರು. ಈ ವೇಳೆ ಶಾಸಕ ನರೇಂದ್ರ ರಾಜುಗೌಡ ಮಾಜಿ ಸಂಸದ ಕಾಗಲವಾಡಿ ಶಿವಣ್ಣ ಮಾಜಿ ಶಾಸಕ ಬಾಲರಾಜ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News