ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Update: 2019-04-13 18:53 GMT

ಶಿವಮೊಗ್ಗ, ಏ. 13: ತಾವು ವಾಸಿಸುತ್ತಿದ್ದ ಬಾಡಿಗೆ ಮನೆಯಲ್ಲಿಯೇ ನೇಣು ಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಕುಶಾವತಿ ಕೆ.ಸಿ. ರಸ್ತೆಯಲ್ಲಿ ನಡೆದಿದೆ. 

ಕಮ್ಮರಡಿಯ ನಿವಾಸಿ ಸುಬ್ರಹ್ಮಣ್ಯ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಮಾಂಸಹಾರಿ ಹೋಟೆಲ್ ನಡೆಸುತ್ತಿದ್ದರು. ವ್ಯಾಪಾರದಲ್ಲಿನ ನಷ್ಟದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News