ಹರೀಶ್ ಶೆಟ್ಟಿ

Update: 2019-04-14 16:07 GMT

ಉಡುಪಿ, ಎ.14: ವಿಜಯ ಕರ್ನಾಟಕ ಪತ್ರಿಕೆಯ ಮಂಗಳೂರು ಆವೃತ್ತಿಯ ಬ್ಯುಸಿನೆಸ್ ಆ್ಯಂಡ್ ಕಮರ್ಷಿಯಲ್ ವಿಭಾಗದ ಸಹಾಯಕ ವ್ಯವಸ್ಥಾಪಕ, ಉಡುಪಿ ಕುಕ್ಕೆಹಳ್ಳಿ ನಿವಾಸಿ ಹರೀಶ್ ಶೆಟ್ಟಿ (39) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಪತ್ನಿ, ಪುತ್ರ, ತಂದೆ, ತಾಯಿ, ಸಹೋದರ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಕರ್ತವ್ಯ ನಿಮಿತ್ತ ಮಂಗಳೂರಿನಲ್ಲಿ ಪತ್ನಿ ಯೊಂದಿಗೆ ವಾಸವಾಗಿದ್ದ ಇವರು, ಶುಕ್ರವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದ ವೇಳೆ ಕಚೇರಿಯಲ್ಲಿ ಕುಸಿದು ಬಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ