ದೇರಳಕಟ್ಟೆ: ಎ. 15ರಂದು ಎಸ್.ಡಿ.ಪಿ.ಐ ಪ್ರಚಾರ ಸಭೆ; ಮುಖ್ಯ ಅತಿಥಿಯಾಗಿ ಅಶ್ರಫ್ ಮೌಲವಿ

Update: 2019-04-14 16:18 GMT

ದೇರಳಕಟ್ಟೆ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಮಹಮ್ಮದ್ ಇಲ್ಯಾಸ್ ಅವರ ಬೃಹತ್ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯು ಎ.15ರಂದು ಸಂಜೆ 7ಕ್ಕೆ ದೇರಳಕಟ್ಟೆ ಜಂಕ್ಷನ್ ನಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯಕಾರಣಿ ಸಮಿತಿ ಸದಸ್ಯರಾದ ಅಶ್ರಫ್ ಮೌಲವಿ ಮುವಾಟಿಪುಝ ಭಾಗವಹಿಸಿ ಮಾತನಾಡಲಿದ್ದಾರೆ. ಸಂಜೆ 5ಕ್ಕೆ ನಾಟೆಕಲ್ ನಿಂದ ದೇರಳಕಟ್ಟೆ ವರೆಗೆ ಬೃಹತ್ ರ್ಯಾಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ, ಜಿಲ್ಲಾ ಮತ್ತು ವಿವಿಧ ಸಾಮಾಜಿಕ ನಾಯಕರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News