ಕೊಣಾಜೆ: ಪಿಕಪ್ ಢಿಕ್ಕಿ- ಹೊತ್ತಿ ಉರಿದ ಬೈಕ್

Update: 2019-04-14 17:35 GMT

ಕೊಣಾಜೆ: ಠಾಣೆ ವ್ಯಾಪ್ತಿಯ ಗಣೇಶ್ ಮಹಲ್ ಬಳಿ ಬೈಕೊಂದಕ್ಕೆ ಪಿಕಪ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಹೊತ್ತಿ ಉರಿದ ಘಟನೆ ರವಿವಾರ ರಾತ್ರಿ ಸಂಭವಿಸಿದೆ.

ಘಟನೆಯಲ್ಲಿ ಬೈಕ್ ಸವಾರ ಹಾಗು ಸಹ ಸವಾರನಿಗೆ ಗಂಭೀರ ಗಾಯವಾಗಿದೆ.

ಮಂಗಳೂರು ವಿಶ್ವವಿದ್ಯಾಲಯ ಬಳಿಯ ಗಣೇಶ್ ಮಹಲ್ ಸಮೀಪ ಪಿಕಪ್ ವಾಹನ ಬೈಕ್ ಗೆ ಢಿಕ್ಕಿ ಹೊಡೆದಿದೆ. ಅಪಘಾತದಿಂದ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ದೇರಳಕಟ್ಟಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News