ಮುಡಿಪು ಬ್ಲಾಕ್ ಕಾಂಗ್ರೆಸ್ ನಿಂದ ಬಿರುಸಿನ ಪ್ರಚಾರ

Update: 2019-04-14 17:55 GMT

ಕೊಣಾಜೆ: ಚುನಾವಣೆಗೆ ಇನ್ನು ಕೆಲವೇ ದಿನ ಬಾಕಿ ಇರುವಂತೆಯೇ ಮುಡಿಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ದ.ಕ. ಲೋಕಸಭಾ ಮೈತ್ರಿ ಅಭ್ಯರ್ಥಿ ಮಿಥುನ್ ರೈ ಪರವಾಗಿ ಮುಡಿಪು ಜಂಕ್ಷನ್ ನಲ್ಲಿ  ರವಿವಾರ ಬಿರುಸಿನ ಪ್ರಚಾರ ನಡೆಯಿತು.

ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರ ನೇತೃತ್ವದಲ್ಲಿ ನಡೆದ ಪ್ರಚಾರ ಕಾರ್ಯದಲ್ಲಿ ಸ್ಟಾರ್ ಪ್ರಚಾರಕ ಶತ್ರುಘ್ನ ಸಿನ್ಹಾ, ದ.ಕ. ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಗಟ್ಟಿ, ತಾಲೂಕು ಪಂ. ಸದಸ್ಯ ಉಸ್ಮಾನ್ ಕರೋಪಾಡಿ, ಬಂಟ್ವಾಳ ತಾಲೂಕು ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೋಂಟುಗೋಳಿ, ಮುಖಂಡರಾದ ಪದ್ಮನಾಭ ನರಿಂಗಾನ, ಉಮರ್ ಪಜೀರ್, ಅಬ್ದುಲ್ ರಝಾಕ್ ಕುಕ್ಕಾಜೆ, ಹೈದರ್ ಕೈರಂಗಳ, ಸಿದ್ದೀಕ್ ಪಾರೆ, ದೇವದಾಸ ಭಂಡಾರಿ, ಸೀತಾರಾಮ ಶೆಟ್ಟಿ, ಸೂಫಿ ಕುಂಞಿ, ಸಮೀರ್ ಪಜೀರ್, ನಾಸೀರ್ ನಡುಪದವು, ಸಿ.ಎಂ. ಶರೀಫ್ ಪಟ್ಟೋರಿ, ಮುರಳೀಧರ್ ಶೆಟ್ಟಿ ಮಾಡೂರು, ಹಸನ್ ಸಾಂಬಾರ್ ತೋಟ, ಲೋಲಾಕ್ಷಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News