ಹನೂರು: ಮಲೆಮಹದೇಶ್ವರ ಬೆಟ್ಟಕ್ಕೆ ಯಡಿಯೂರಪ್ಪ ಭೇಟಿ
Update: 2019-04-14 17:55 GMT
ಹನೂರು, ಎ.14: ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕೊಳ್ಳೇಗಾಲ ಮತ್ತು ಚಾಮರಾಜನಗರದಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ಬಹಿರಂಗ ಸಭೆಯ ಪ್ರಯುಕ್ತ ಆಗಮಿಸಿದ ಹಿನ್ನೆಲೆಯಲ್ಲಿ ರವಿವಾರ ಬೆಳಗ್ಗೆ ಮಹದೇಶ್ವರನ ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ನಂತರ ಕೊಳ್ಳೇಗಾಲ ಮತ್ತು ಚಾಮರಾಜನಗರಕ್ಕೆ ವಾಪಸ್ಸಾದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಪ್ರೀತಂ ನಾಗಪ್ಪ, ವಕೀಲ ರಂಗಸ್ವಾಮಿ, ರಾಮಾಪುರ ನವೀನ್ ಮತ್ತಿತರರು ಹಾಜರಿದ್ದರು.