ಎಂ.ಬಿ.ಪಾಟೀಲ್- ಡಿಕೆಶಿ ಕುಡುಕರ ಹಾಗೆ ಹೊಡೆದಾಡುತ್ತಿದ್ದಾರೆ: ಈಶ್ವರಪ್ಪ

Update: 2019-04-14 18:38 GMT

ಶಿವಮೊಗ್ಗ, ಏ. 14: ಸಚಿವರಾದ ಡಿ.ಕೆ.ಶಿವಕುಮಾರ್ ಹಾಗೂ ಎಂ.ಬಿ.ಪಾಟೀಲ್‍ರವರು ರಸ್ತೆಯಲ್ಲಿ ಹೋಗುವ ಕುಡುಕರು ಬಡಿದಾಡುವುದಿಲ್ಲ, ಆ ರೀತಿ ಹೊಡೆದಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ. 

ಭಾನುವಾರ ಶಿವಮೊಗ್ಗ ನಗರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಇಬ್ಬರು ಒಂದೇ ಪಕ್ಷದ ನಾಯಕರಾಗಿದ್ದಾರೆ. ಆದರೆ ಏಕವಚನದಲ್ಲಿ ನಿಂದಿಸಿಕೊಳ್ಳುತ್ತಿದ್ದಾರೆ. ಇದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ. 

ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಹೊಂದಾಣಿಕೆಯೇ ಇಲ್ಲವಾಗಿದೆ. ಎಲ್ಲ ರೂಪದಲ್ಲಿಯೂ ಅವರು ಬಡಿದಾಡುತ್ತಿದ್ದಾರೆ. ಎರಡೂ ಪಕ್ಷಗಳ ನಡುವೆ ಹೊಂದಾಣಿಕೆ ಮೇಲ್ಪಟ್ಟದಲ್ಲಿಯೂ ಇಲ್ಲ. ಕೆಳಮಟ್ಟದಲ್ಲಿಯೂ ಇಲ್ಲ ಎಂದು ಟೀಕಿಸಿದ್ದಾರೆ.

ಎರಡೂ ಪಕ್ಷಗಳ ನಡುವೆಯಿರುವ ಭಿನ್ನಾಭಿಪ್ರಾಯ ಶಮನವಾಗಿಲ್ಲ. ಇದರಿಂದ ಬಿಜೆಪಿ ಪಕ್ಷ ಶಿವಮೊಗ್ಗ ಸೇರಿದಂತೆ ರಾಜ್ಯದ ಎಲ್ಲೆಡೆಯೂ ಜಯ ಸಾಧಿಸಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News