ಬಂಟ್ವಾಳದಲ್ಲಿ ಅರೆಸೇನಾ ಪಡೆಗಳಿಂದ ಪಥಸಂಚಲನ

Update: 2019-04-15 13:14 GMT

ಬಂಟ್ವಾಳ, ಎ. 15: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರಿಗೆ ಧೈರ್ಯ ತುಂಬುವ ನಿಟ್ಟಿನಲ್ಲಿ ಸೋಮವಾರ ಬಂಟ್ವಾಳದಲ್ಲಿ ಪೊಲೀಸರ ಸಹಕಾರದೊಂದಿಗೆ ಅರೆಸೇನಾ ಪಡೆಗಳಿಂದ ಪಥಸಂಚಲನ ನಡೆಯಿತು.

ಬಂಟ್ವಾಳದ ಕೆಳಗಿನ ಪೇಟೆಯಿಂದ ತುಂಬೆ ಜಂಕ್ಷನ್‍ವರೆಗೆ ಪಥಸಂಚಲನ ನಡೆಯಿತು. ಈ ಸಂದರ್ಭದಲ್ಲಿ ಬಂಟ್ವಾಳ ಎಎಸ್ಪಿ ಸೈದುಲು ಅಡಾವತ್, ಬಂಟ್ವಾಳ ವೃತ್ತ ನಿರೀಕ್ಷಕ ಶರಣ್ ಗೌಡ, ಬಂಟ್ವಾಳ ನಗರ ಠಾಣಾ ಉಪನಿರೀಕ್ಷಕ ಚಂದ್ರಶೇಖರ್, ಗ್ರಾಮಾಂತರ ಠಾಣಾ ಎಸ್ಸೈ ಪ್ರಸನ್ನ, ಟ್ರಾಫಿಕ್ ಎಸ್ಸೈ ಮಂಜುನಾಥ್, ಬಂಟ್ವಾಳ ನಗರ ಠಾಣಾ ಅಪರಾಧ ವಿಭಾಗದ ಎಸ್ಸೈ ಸುಧಾಕರ ತೋನ್ಸೆ, ಐಟಿಬಿಟಿ ಇನ್‍ಸ್ಪೆಕ್ಟರ್ ಅನಿಲ್ ಕುಮಾರ್, ರಾಜೇಶ್ ಹಾಗೂ ಬಂಟ್ವಾಳ ವೃತ್ತದ ಪೊಲೀಸರು ಪಥಸಂಚಲನದಲ್ಲಿ ಭಾಗವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News