ಇವಿಎಂ-ವಿವಿ ಪ್ಯಾಟ್ಗಳ ಮೇಲೆ ಸಾಕಷ್ಟು ಅನುಮಾನ ಇದೆ: ಮೈಸೂರಿನಲ್ಲಿ ಚಂದ್ರಬಾಬು ನಾಯ್ಡು
Update: 2019-04-15 16:22 GMT
ಮೈಸೂರು,ಎ.15: ಲೋಕಸಭಾ ಚುನಾವಣೆಯಲ್ಲಿ ಇವಿಎಂ ಮತ್ತು ವಿವಿ ಪ್ಯಾಟ್ಗಳ ಬಗ್ಗೆ ಸಾಕಷ್ಟು ಅನುಮಾನ ಇದೆ ಎಂದು ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದರು.
ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರದಲ್ಲಿ ಭಾಗವಹಿಸಲು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಸೋಮವಾರ ಆಗಮಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಸಂವಿಧಾನ ಮತ್ತು ಚುನಾವಣಾ ಆಯೋಗವನ್ನು ಬಿಜೆಪಿ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಹಾಗಾಗಿ ಇವಿಎಂ ಮತ್ತು ವಿವಿ ಪ್ಯಾಟ್ಗಳು ದುರುಪಯೋಗ ಆಗುವ ಸಾಧ್ಯತೆ ಇದೆ ಎಂದರು.
ನಾನು ಜೆಡಿಎಸ್ ಪರ ಚುನಾವಣಾ ಪ್ರಚಾರ ಮಾಡಲು ಬಂದಿದ್ದೇನೆ. ಬಿಜೆಪಿ ಸೋಲಿಸುವುದೇ ನಮ್ಮ ಗುರಿ. ಬಿಜೆಪಿ ವಿರುದ್ಧ ದೇಶದ ಪ್ರತಿಯೊಬ್ಬರು ಮತಹಾಕಬೇಕಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರ ಮನೆ ಮೇಲೆ ಐಟಿ ದಾಳಿ ಮಾಡಿಸಲಾಗುತ್ತಿದೆ. ಬಿಜೆಪಿ ಪಕ್ಷದವರ ಒಂದೇ ಒಂದು ಮನೆಗಳ ಮೇಲೆ ದಾಳಿ ನಡೆದಿಲ್ಲ ಎಂದು ಆರೋಪಿಸಿದರು.