ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2019-04-15 17:22 GMT

ಕಾಪು, ಎ.15: ಕಾರೊಂದು ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉದ್ಯಾವರ ಹಲಿಮಾ ಸಾಬ್ಜು ಅಡಿಟೋರಿ ಯಂ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎ.14ರಂದು ತಡರಾತ್ರಿ ವೇಳೆ ನಡೆದಿದೆ.

ಮೃತರನ್ನು ಬೆಳ್ಳರ್ಪಾಡಿ ನಿವಾಸಿ ಸುರೇಶ ದೇವಾಡಿಗ(43) ಎಂದು ಗುರು ತಿಸಲಾಗಿದೆ. ಮಲ್ಪೆ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದ ಅವರು ರಾತ್ರಿ ಕೆಲಸ ಮುಗಿಸಿ ಪತ್ನಿ ಮನೆಗೆ ಹೋಗುತ್ತಿದ್ದರೆನ್ನಲಾಗಿದೆ. ಉಡುಪಿ ಕಡೆಯಿಂದ ಕಾಪು ಕಡೆಗೆ ಹೋಗುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆಯಿತು.

ಇದರಿಂದ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸುರೇಶ್ ದೇವಾಡಿಗ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಅಪಘಾತ ಎಸಗಿದ ಕೇರಳ ಮೂಲದ ಕಾರು ನಿಲ್ಲಿಸದೆ ಪರಾರಿಯಾಗಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News