ಪ್ರಜಾಪ್ರಭುತ್ವ ಕಾಪಾಡಲು ಪ್ರಕಾಶ್ ರಾಜ್‌ಗೆ ಮತ ನೀಡಿ: ಯೋಗೇಂದ್ರ ಯಾದವ್

Update: 2019-04-15 18:12 GMT

ಬೆಂಗಳೂರು, ಎ.15: ದೇಶವು ಕೋಮುವಾದದಿಂದಾಗಿ ರಾಷ್ಟ್ರದ ಪ್ರಜಾಸತ್ತಾತ್ಮಕ ಆಶಯ ಮತ್ತು ಸಂವಿಧಾನಕ್ಕೆ ಧಕ್ಕೆಯಾಗುವಂತಹ ಅಪಾಯದಲ್ಲಿ ನಾವೆಲ್ಲರೂ ಇದ್ದೇವೆ. ಇಂತಹ ಅನಿಷ್ಟತೆಯನ್ನು ತಡೆಗಟ್ಟಲು ಹಾಗೂ ಪ್ರಜಾಪ್ರಭುತ್ವವನ್ನು ಕಾಪಾಡಲು ಕೇಂದ್ರ ಲೋಕಸಭೆ ಅಭ್ಯರ್ಥಿ ಪ್ರಕಾಶ್ ರಾಜ್ ಅವರಂಥವರಿಗೆ ಮತ ನೀಡಿ ಗೆಲ್ಲಿಸುವ ಅವಶ್ಯಕತೆ ಇದೆ ಎಂದು ಸ್ವರಾಜ್ ಪಕ್ಷದ ರಾಷ್ಟ್ರಾಧ್ಯಕ್ಷ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಸೋಮವಾರ ಬೆಂಗಳೂರಿನಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರಾಜ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕಾಶ್ ರಾಜ್ ಅವರು ಪ್ರಜಾಪ್ರಭುತ್ವದ ಆಶಯಗಳಿಗೆ ಅನುಸಾರವಾಗಿ ಕೆಲಸ ಮಾಡುವವರು. ಹೀಗಾಗಿ, ಪ್ರಸ್ತುತ ಸಂದರ್ಭದಲ್ಲಿ ಪ್ರಕಾಶ್ ರಾಜ್ ಅವರನ್ನು ಮತದಾರರು ಮತ ನೀಡಿ ಗೆಲ್ಲಿಸಬೇಕಾಗಿದೆ ಎಂದು ಹೇಳಿದರು.

ಪ್ರಕಾಶ್ ರಾಜ್ ಅವರು ಕೆಟ್ಟ ಚುನಾವಣಾ ಅಕ್ರಮಗಳ ವಿರುದ್ಧ ಸೆಟೆದು ನಿಂತು ಹೋರಾಟವನ್ನು ಮಾಡುತ್ತಿದ್ದಾರೆ. ಈ ರೀತಿಯ ಹೋರಾಟಗಾರರಲ್ಲಿ ಪ್ರಕಾಶ್ ರಾಜ್ ಮುಂಚೂಣಿಯಲ್ಲಿದ್ದಾರೆ. ಮತದಾರ ಬಂಧುಗಳು ರಾಷ್ಟ್ರದ ಜಾತ್ಯತೀತ ತತ್ವದ ಉಳಿವಿಗಾಗಿ, ಏಕತೆಗಾಗಿ, ಸಮಗ್ರತೆಗಾಗಿ ಹಾಗೂ ಭ್ರಾತೃತ್ವಕ್ಕಾಗಿ ಅವರಿಗೆ ಮತ ನೀಡಲೇಬೇಕೆಂದು ಮನವಿ ಮಾಡಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News