ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆ: ವೇದವ್ಯಾಸ ಕಾಮತ್

Update: 2019-04-16 07:39 GMT

ಮಂಗಳೂರು, ಎ.16: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ವಿಧಾನಸಭಾ ಚುನಾವಣೆಗಿಂತಲು ಅಧಿಕ ಮತಗಳು ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗಳಿಸಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 10 ವರ್ಷಕ್ಕಿಂತ ಮೊದಲು ಕೇಂದ್ರದಲ್ಲಿ ಬಿಜೆಪಿಯೇತರ ಸರಕಾರ ಅಧಿಕಾರದಲ್ಲಿದ್ದ ಕಾರಣ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಲು ಇಲ್ಲಿನ ಸಂಸದರಿಗೆ ಕಷ್ಟವಾಗಿತ್ತು. ಆದರೆ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರ ರಚನೆಯಾದ ಬಳಿಕ ಸಾಕಷ್ಟು ಅನುದಾನ ಈ ಕ್ಷೇತ್ರಕ್ಕೆ ಬಂದಿದೆ. ಇದರಿಂದಾಗಿ ಈ ಬಾರಿ ಹೆಚ್ಚಿನ ಜನರು ಮತ್ತೆ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಭಾಸ್ಕರ ಚಂದ್ರ ಶೆಟ್ಟಿ, ಕಿಶೋರ್ ಕುಮಾರ್ ರೈ, ಪ್ರಭಾ ಮಾಲಿನಿ, ನಾರಾಯಣ ಬೆಟ್ಟಂಪಾಡಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News