ಫಾರ್ಮ್ ಹೌಸ್ ಮೇಲೆ 'ಐಟಿ ದಾಳಿ' ಬಗ್ಗೆ ನಟ ದರ್ಶನ್ ಹೇಳಿದ್ದೇನು ?

Update: 2019-04-16 15:17 GMT

ಮೈಸೂರು,ಎ.16: ಮೈಸೂರಿನ ಟಿ.ನರಸೀಪುರದಲ್ಲಿರುವ ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ಐಟಿ ದಾಳಿ ನಡೆದಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಹರಡಿತ್ತು. ಆದರೆ ದರ್ಶನ್ ಅವರ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿದ್ದು ಐಟಿ ಅಧಿಕಾರಿಗಳಲ್ಲ, ಚುನಾವಣಾಧಿಕಾರಿಗಳು ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರೇ ಸ್ಪಷ್ಟನೆ ನೀಡಿದ್ದಾರೆ. ಐಟಿ ಅಧಿಕಾರಿಗಳು ನಮ್ಮ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿಲ್ಲ. ಬದಲಾಗಿ ಚುನಾವಣಾ ಆಯೋಗದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಲ್ಲಿ ಚುನಾವಣೆಗೆ ಸಂಬಂಧಪಟ್ಟ ಯಾವುದೇ ಚಟುವಟಿಕೆ ನಡೆಯುತ್ತಿರುವುದು ಕಂಡು ಬಾರದ ಕಾರಣ ವಾಪಸ್ ಹೋಗಿದ್ದಾರೆ ಎಂದು ದರ್ಶನ್ ತಿಳಿಸಿದ್ದಾರೆ.

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ, ಮೈಸೂರು ಜಿಲ್ಲೆ ಟಿ. ನರಸೀಪುರದಲ್ಲಿರುವ ದರ್ಶನ್ ಅವರ ಫಾರ್ಮ್ ಹೌಸ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆಂಬ ಮಾಹಿತಿ ಹೊರ ಬಿದ್ದಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News