ಪರೀಕ್ಷೆಯಲ್ಲಿ ಅನುತ್ತೀರ್ಣ: ವಿದ್ಯಾರ್ಥಿನಿ ಆತ್ಮಹತ್ಯೆ

Update: 2019-04-16 16:58 GMT

ಮೂಡುಬಿದಿರೆ: ಪಿಯುಸಿ ಪರೀಕ್ಷೆಯಲ್ಲಿ ಫೇಲಾದ ಕಾರಣಕ್ಕೆ ಬೇಸತ್ತು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೊಮವಾರ ನಡೆದಿದೆ.  ಮಾಂಟ್ರಾಡಿಯ ಹಿನ್ನಲ ಫಲ್ಕೆ ಮನೆ ಜಯ ಶೆಟ್ಟಿಯವರ ಪುತ್ರಿ ಪ್ರತೀಕ್ಷಾ (18ವ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಈಕೆ ಮೂಡುಬಿದಿರೆಯ ಟ್ಯುಟೋರಿಯಲ್‍ನಲ್ಲಿ ಕಲಿತು ಖಾಸಗಿಯಾಗಿ ಪರೀಕ್ಷೆ ಬರೆದಿದ್ದಳು. ಪರೀಕ್ಷೆಯ ಬಳಿಕ ಪ್ರತೀಕ್ಷಾ ಪುಣೆಯಲ್ಲಿರುವ ತನ್ನ ಚಿಕ್ಕಪ್ಪನ  ಮನೆಗೆ ತೆರಳಿದ್ದಳು.  ಸೋಮವಾರ ಪರೀಕ್ಷೆ ಫಲಿತಾಂಶದಲ್ಲಿ ಅನುತ್ತೀರ್ಣಗೊಂಡದ್ದು ತಿಳಿದು ಬೇಸರಗೊಂಡ ಆಕೆ ಚಿಕ್ಕಪ್ಪನ ಮನೆಯಲ್ಲಿ ಕೋಣೆಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಳೆನ್ನಲಾಗಿದೆ. ಮಂಗಳವಾರ ಆಕೆಯ ಮೃತದೇಹವನ್ನು ಹುಟ್ಟೂರಿನಲ್ಲಿ ಮನೆಗೆ ತಂದು ಅಂತ್ಯ ಸಂಸ್ಕಾರ ನಡೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News