ಎರಡನೆ ಹಂತದ ಲೋಕಸಭಾ ಚುನಾವಣೆ: ಕಾಂಗ್ರೆಸ್ ಉಸ್ತುವಾರಿಗಳ ನೇಮಕ

Update: 2019-04-16 17:31 GMT

ಬೆಂಗಳೂರು, ಎ.16: ರಾಜ್ಯದಲ್ಲಿ ನಡೆಯಲಿರುವ ಎರಡನೆ ಹಂತದ ಲೋಕಸಭಾ ಚುನಾವಣೆಯ ಉಸ್ತುವಾರಿಗಳನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆದೇಶ ಹೊರಡಿಸಿದ್ದಾರೆ.

ಉಸ್ತುವಾರಿಗಳು ಲೋಕಸಭಾ ಕ್ಷೇತ್ರದಲ್ಲಿ ಎ.19 ರಿಂದ 21ರವರೆಗೆ ವಾಸ್ತವ್ಯ ಹೂಡಿ, ಪ್ರಚಾರ ಕಾರ್ಯಕ್ರಮಗಳು ಸುಗಮವಾಗಿ ನಡೆಯುವಂತೆ ನೋಡಿಕೊಂಡು ಪಕ್ಷದ/ಮೈತ್ರಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಅವರು ತಿಳಿಸಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರ-ಡಿ.ಕೆ.ಸುರೇಶ್, ಬಳ್ಳಾರಿ ಲೋಕಸಭಾ ಕ್ಷೇತ್ರ-ಆರ್.ಧೃವನಾರಾಯಣ್, ಉತ್ತರ ಕನ್ನಡ ಲೋಕಸಭಾ ಕ್ಷೇತ್ರ- ಬಿ.ಕೆ.ಹರಿಪ್ರಸಾದ್, ವಿಜಯಪುರ ಲೋಕಸಭಾ ಕ್ಷೇತ್ರ-ಡಾ.ಎಚ್.ಸಿ.ಮಹದೇವಪ್ಪ.

ರಾಯಚೂರು ಲೋಕಸಭಾ ಕ್ಷೇತ್ರ-ಡಾ.ಎಂ.ವೀರಪ್ಪ ಮೊಯ್ಲಿ, ಧಾರವಾಡ ಲೋಕಸಭಾ ಕ್ಷೇತ್ರ-ಕೃಷ್ಣಭೈರೇಗೌಡ, ಬೆಳಗಾವಿ ಲೋಕಸಭಾ ಕ್ಷೇತ್ರ-ಯು.ಟಿ. ಖಾದರ್, ಹಾವೇರಿ ಲೋಕಸಭಾ ಕ್ಷೇತ್ರ-ಝಮೀರ್ ಅಹ್ಮದ್ ಖಾನ್ ಹಾಗೂ ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಕೆ.ಎಚ್.ಮುನಿಯಪ್ಪರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News