ರಸ್ತೆ ಅಪಘಾತ: ವೈದ್ಯಕೀಯ ವಿದ್ಯಾರ್ಥಿ ಮೃತ್ಯು

Update: 2019-04-16 18:23 GMT

ಬೆಂಗಳೂರು, ಎ.16: ಬೈಕ್‌ನಲ್ಲಿ ಹೋಗುತ್ತಿದ್ದ ಕೇರಳ ಮೂಲದ ಮೆಡಿಕಲ್ ವಿದ್ಯಾರ್ಥಿ ನಿಯಂತ್ರಣ ತಪ್ಪಿ ಬಿದ್ದು, ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಬನಶಂಕರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಮೃತಪಟ್ಟ ವಿದ್ಯಾರ್ಥಿಯನ್ನು ಅಬ್ರಾಹಂ ಫಿಲಿಪ್ಸ್ ಸಜಿ(23) ಎಂದು ತಿಳಿದುಬಂದಿದೆ. ಹೊಸಕೆರೆಹಳ್ಳಿಯ ಕಾಲೇಜೊಂದರಲ್ಲಿ ಫಿಜಿಯೋಥೆರಪಿ ಕೋರ್ಸ್ ವ್ಯಾಸಂಗ ಮಾಡುತ್ತಿದ್ದ ಅಬ್ರಾಹಂ ಕಾಲೇಜಿನ ವಸತಿ ಗೃಹದಲ್ಲೇ ವಾಸವಾಗಿದ್ದ ಎಂದು ತಿಳಿದುಬಂದಿದೆ.

ಸೋಮವಾರ ರಾತ್ರಿ ಅಂಗಡಿಗೆ ತೆರಗಳಿದ್ದ ಅಬ್ರಾಹಂ, ವಸ್ತುಗಳನ್ನು ಖರೀದಿಸಿ ಬೈಕ್‌ನಲ್ಲಿ ವಸತಿ ಗೃಹಕ್ಕೆ ಹಿಂದಿರುತ್ತಿದ್ದರು. ನಗರದ ಬನಶಂಕರಿ 3ನೇ ಹಂತ, ದತ್ತಾತ್ರೇಯ ನಗರ ಶನಿಮಹಾತ್ಮ ದೇವಸ್ಥಾನದ ರಸ್ತೆಯಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಅಬ್ರಾಹಂ ಬೈಕ್‌ನಿಂದ ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದೆ.

ತಲೆಗೆ ಗಂಭೀರ ಪೆಟ್ಟಾದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸುದ್ದಿ ತಿಳಿದ ಬನಶಂಕರಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News