ನನ್ನ ಫೋಟೊ ದುರ್ಬಳಕೆ: ಯುವತಿಯಿಂದ ಮೈಸೂರು ಜಿಲ್ಲಾಧಿಕಾರಿಗೆ ದೂರು

Update: 2019-04-17 12:22 GMT

ಮೈಸೂರು: ಸಾಮಾಜಿಕ ಜಾಲತಾಣಗಳಲ್ಲಿ ಸಂಸದ ಪ್ರತಾಪ್ ಸಿಂಹ ಅವರೊಂದಿಗೆ ಸಂಬಂಧವಿದೆ ಎಂದು ಬಿಂಬಿಸಿ ನನ್ನ ಫೋಟೊ ಬಳಸಿ ಚಾರಿತ್ರ ಹರಣ ಮಾಡುತಿದ್ದಾರೆ ಎಂದು ಆರೋಪಿಸಿ ಯುವತಿಯೋರ್ವಳು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ನನ್ನ ಫೋಟೊ ಬಳಸಿ ಸಂಸದ ಪ್ರತಾಪ್ ಸಿಂಹ ಜೊತೆ ನನಗೆ ಸಂಬಂಧವಿದೆ ಎಂದು  ಚಾರಿತ್ರ ಹರಣ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕಾಲೇಜಿನ ದಿನಗಳಲ್ಲಿ ನಾನು ಪ್ರತಾಪ್ ಸಿಂಹ ಅವರ ಅಭಿಮಾನಿ. ಅವರು ಮೈಸೂರಿನ ಸಂಸದರಾದ ಮೇಲೆ ಅವರ ಕಚೇರಿಗೆ ಮೂರ್ನಾಲ್ಕು ಬಾರಿ ಭೇಟಿ ಕೊಟ್ಟು ಅವರ ಮಗಳು ಮತ್ತು ಅವರ ಜೊತೆ ಸೆಲ್ಫಿ ತೆಗೆಸಿಕೊಂಡು ಫೇಸ್ ಬುಕ್ ಮತ್ತು ವಾಟ್ಸ್ಆ್ಯ ಪ್ ಸ್ಟೇಟಸ್ ನಲ್ಲಿ ಹಾಕಿದ್ದೆ. ಆ ಫೋಟೊವನ್ನು ಕಿಡಿಗೇಡಿಗಳು ದುರ್ಬಳಕೆ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುತಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರಿಗೆ ದೂರು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News