ಕೊಲೆಗೈಯಲ್ಪಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
Update: 2019-04-17 12:44 GMT
ಕೋಲಾರ,ಎ.17: ಯುವಕನ ಮೃತದೇಹ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈಯಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ತಾಲೂಕಿನ ಕಸಬ ಹೋಬಳಿಯ ಮಾರಾಂಡಹ ಕೆರೆಯಲ್ಲಿ ನಡೆದಿದೆ.
ಸುನಿಲ್ ಕುಮಾರ್ (24) ಮೃತ ಯುವಕ. ಮುಳಬಾಗಿಲು ತಾಲೂಕಿನ ಕೀಲಾಗಾಣಿ ಗ್ರಾಮದ ನಿವಾಸಿ ಸುನೀಲ್ ಕುಮಾರ್ ಕಸಬ ಹೋಬಳಿಯ ಮಾರಾಂಡಹಳ್ಳಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಬಣದಲ್ಲಿ ಗುರುತಿಸಿಕೊಂಡಿದ್ದ ಸುನೀಲ್ ಬೆನ್ನಿಗೆ ಮಾರಕಾಸ್ತ್ರಗಳಿಂದ ಚುಚ್ಚಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ, ಡಿವೈಎಸ್ಪಿ, ಪಿಎಸ್ಐ ಭೇಟಿ ನೀಡಿ ಪರಿಶೀಲಿಸಿದ್ದು, ಮುಳಬಾಗಿಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.